ಶಿಕ್ಷಣ ಇಲಾಖೆಯಿಂದ ಮತದಾನ ಜಾಗೃತಿ ಅಭಿಯಾನ

ಹೂವಿನ ಹಡಗಲಿ, 26:  ಮುಂದಿನ ತಿಂಗಳು  ಮೇ 7 ರಂದು ಜರುಗುವ ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಬಿ ಆರ್ ಪಿ ಎಂ ಮಲ್ಲಿಕಾರ್ಜುನ ಹೇಳಿದರು. ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.ಯಾವುದೇ ಆಮಿಷಗಳಿಗೆ ಒಳಗಾಗದೆ ನಿಮ್ಮ ಪವಿತ್ರವಾದ ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಿರಿ "ಎಂದು ಶಿಕ್ಷಕ ಬನ್ನೆಪ್ಪತಿಳಿಸಿದರು. ನಿರ್ಭೀತಿಯಿಂದ ಮತದಾನ ಮಾಡಿ. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ, ಕ್ಷೇತ್ರ ಸಮನ್ವಯಾಧಿಕಾರಿಎ ಕೋಟೆಪ್ಪ ಪ್ರೌಢಶಾಲಾ ಮುಖ್ಯ ಗುರುಗಳು ಬಿ ಆರ್ ಸಿ ಬಿ ಆರ್ ಪ ಇತರರು ಉಪಸ್ಥಿತರಿದ್ದರು. ಹೊಸ ಬಸ್ ನಿಲ್ದಾಣದಲ್ಲಿ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕ ರಿಗೆ, ಬಸ್ ಚಾಲಕ ನಿರ್ವಾಹಕ ಸಿಬ್ಬಂದಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.