ಕೊರ‌್ಲಗುಂದಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ

ಬಳ್ಳಾರಿ,06: ಗ್ರಾಮೀಣ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರಿಗೆ ಮೇ 07 ರಂದು ನಡೆಯುವ ಲೋಕಸಭಾ ಚುನಾವಣೆಗೆ ಕಡ್ಡಾಯವಾಗಿ ಮತ ಚಲಾಯಿಸುವಂತೆ ಮತದಾನ ಅರಿವು ಮೂಡಿಸಲಾಯಿತು. 

ಕೊರ್ಲಗುಂದಿ ಗ್ರಾಮ ಪಂಚಾಯತಿಯ ಪಿ.ಡಿ.ಓ ಪ್ರಕಾಶ್ ಅವರು ಮಾತನಾಡಿ, 18 ವರ್ಷ ತುಂಬಿದ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸುವುದರ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರೋತ್ಸಾಹಿಸಿ ಎಂದು ಹೇಳಿದರು. 

ಪ್ರಜಾಪ್ರಭುತ್ವದಲ್ಲಿ ಎಲ್ಲಾರೂ ಮತದಾರ ಪ್ರಭುಗಳು. ಯಾವುದೇ ಆಸೆ-ಅಮೀಷಗಳಿಗೆ ಮರುಳಾಗದೇ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದರು. 

ಬಳಿಕ ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. 

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರುದ್ರ​‍್ಪ, ತಾಲ್ಲೂಕು ಸಂಯೋಜಕ ರಮೇಶ್, ತಾಂತ್ರಿಕ ಸಹಾಯಕಿ ಶೃತಿ, ಬಿ.ಎಫ್‌.ಟಿ ನಜೀರ್ ಸೇರಿದಂತೆ ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಹಾಜರಿದ್ದರು.