ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಡಾನೆ ಪ್ರತ್ಯಕ್ಷ
ಮಂಗಳೂರು, ಫೆ 20, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಗುರುವಾರ ಮುಂಜಾನೆ ಕಾಡಾನೆ ಪ್ರತ್ಯಕ್ಷವಾಗಿತ್ತು. ಆನೆಯು ಬೆಳಿಗ್ಗೆ ಸುಮಾರು 5.30ಕ್ಕೆ ಪಟ್ಟಣದ ಕಾಶಿ ಕಟ್ಟೆಯಿಂದ ನುಚಿಲಾಕ್ಕೆ ಯಾವುದೇ ಹಾನಿ ಉಂಟುಮಾಡದೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ತ್ಯಾಗರಾಜ್ ಹೇಳಿದ್ದಾರೆ.
ಇದೇ ಆನೆಯನ್ನು ಕೆಲ ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಹರಿಹರ ಎಂಬ ಸಣ್ಣ ಹಳ್ಳಿಯಲ್ಲಿ ಗುರುತಿಸಲಾಗಿತ್ತು. ಆನೆಯು ಕೆಲ ದಿನಗಳಿಂದ ಹತ್ತಿರದ ಕಾಡುಗಳಲ್ಲಿ ಸುತ್ತಾಡುತ್ತಿದೆ. ಆದರೆ, ಇಲ್ಲಿಯವರೆಗೆ ಆನೆ ಜನರಿಗೆ ಯಾವುದೇ ತೊಂದರೆ ಮಾಡಿಲ್ಲ. ಅಥವಾ ಯಾವುದೇ ಆಸ್ತಿ-ಪಾಸ್ತಿಗೆ ಹಾನಿ ಮಾಡಿಲ್ಲ ಎಂದು ತ್ಯಾಗರಾಜ್ ಹೇಳಿದರು. ಪ್ರಸಿದ್ಧ ಯಾತ್ರಾ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ಪಶ್ಚಿಮ ಘಟ್ಟಗಳ ತಪ್ಪಲಲ್ಲಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 