ಶೀಲ ಮತ್ತು ಮೌಲ್ಯ ಬೆಳೆಸುವ ಶಿಕ್ಷಣ ಬೇಕು : ವೀರಪ್ಪ ಮೊಯಿಲಿ
ಮಂಗಳೂರು, ಫೆ 6,ಒಳ್ಳೆಯ ಗುಣ ನಡೆತ , ಶೀಲ , ಮೌಲ್ಯವನ್ನು ನೀಡುವಂತ ಶಿಕ್ಷಣವೇ ಶ್ರೇಷ್ಠ ಶಿಕ್ಷಣ. ಇಂತಹ ಶಿಕ್ಷಣವನ್ನು ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜು ಕಲ್ಪಿಸಿದ್ದು, ಮುಂದೆಯೂ ಈ ಸಂಸ್ಥೆ ತನ್ನ ಪರಂಪರೆಯನ್ನು ಮುಂದುವರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ 150 ವರ್ಷಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯ ಕಾಲೇಜು ಶ್ರೇಷ್ಠ ಶಿಕ್ಷಣ ಪರಂಪರೆಯ ಯನ್ನು ಕಟ್ಟಿಕೊಟ್ಟ ಸಂಸ್ಥೆಯಾಗಿದೆ. ಮೇಧಾವಿ ಶಿಕ್ಷಕರನ್ನು ರೂಪಿಸಿದ ಈ ಕಾಲೇಜು ಸಹಸ್ರಾರು ಸಾಧಕ ವಿದ್ಯಾರ್ಥಿಗಳನ್ನು ನಾಡಿಗೆ ನೀಡಿದೆ ಎಂದು ಹೇಳಿದರು.ಅಂಚೆ ಇಲಾಖೆಯು ವಿಶ್ವವಿದ್ಯಾನಿಲಯ ಕಾಲೇಜಿನ 150 ನೇ ವರ್ಷಾಚರಣೆ ಪ್ರಯುಕ್ತ ಹೊರತಂದ ವಿಶೇಷ ಅಂಚೆ ಚೀಟಿಯನ್ನು ವೀರಪ್ಪ ಮೊಯ್ಲಿ ಅವರು ಬಿಡುಗಡೆ ಮಾಡಿದರು.ಸಮಾರಂಭ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ, ಮಾಹಿತಿ ನೀಡುವುದಷ್ಟೇ ಶಿಕ್ಷಣವಲ್ಲ , ಜ್ಞಾನ ಪರಂಪರೆ ಕಟ್ಟಿಕೊಡುವುದೇ ನಿಜವಾದ ಶಿಕ್ಷಣ. ಈ ನಿಟ್ಟಿನಲ್ಲಿ ಕಾಲೇಜಿನ ಸಾಧನೆ ಅನನ್ಯ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿ.ವಿ.ಕುಲಪತಿ ಪ್ರೋ. ಪಿ.ಎಸ್.ಯಡಪಡಿತ್ತಾಯ ಮಾತನಾಡಿ, ಈ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಔನತ್ಯ ಸಾಧಿಸುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೊಸ ಕಾಲದ ಬೇಡಿಕೆಗೆ ಶಿಕ್ಷಣದಲ್ಲಿ ಹೊಸತನವನ್ನು ಮೂಡಿಸಿಕೊಂಡು ಕಾಲೇಜು ಮುಂದುವರಿದಿದೆ ಎಂದು ಹೇಳಿದರು.ಶಾಸಕರಾದ ಯು.ಟಿ.ಖಾದರ್ , ಐವನ್ ಡಿಸೋಜಾ, ರಾಜ್ಯ ಅಂಚೆ ಅಧೀಕ್ಷಕ ಚಾರ್ಲ್ಸ್ ಲೋಬೋ , ಪುರಾತತ್ವ ಇಲಾಖೆಯ ನಿರ್ದೇಶಕ ಶಿವಕಾಂತ್ ಬಾಜಪೇಯಿ , ಕರ್ನಲ್ ಶರತ್ ಭಂಡಾರಿ, ಡಾ.ರಾಮಕೃಷ್ಣ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲ ಡಾ.ಉದಯ ಕುಮಾರ್ ಇರ್ವತ್ತೂರು ಸ್ವಾಗತಿಸಿದರು, ಪ್ರೋ.ಜಯವಂತ ನಾಯಕ್ ವಂದಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 