ರಾಜ್ಯಾದ್ಯಂತ ಜಸ್ಟಿಸ್ ಫಾರ್ ಸ್ವಾತಿ ಅಭಿಯಾನ ಆರಂಭದ ಎಚ್ಚರಿಕೆ
Warning for the start of the Justice for Swati campaign across the state
ಕೊಲೆ ಆರೋಪಿಗಳನ್ನೆಲ್ಲಾ ಬಂಧಿಸಿ ಶೀಘ್ರ ಜೈಲಿಗೆ ಅಟ್ಟದಿದ್ದರೆ
ರಾಣೇಬೆನ್ನೂರು 15 : ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ (22) ಎಂಬ ಯುವತಿಯ ಶವ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದ ತುಂಗಭದ್ರಾ ನದಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದ್ದು ಈಗಾಗಲೆ ಈ ಪ್ರಕರಣದಲ್ಲಿ ಪೊಲೀಸರು ಒರ್ವ ವ್ಯಕ್ತಿಯನ್ನು ಬಂಧಿಸಿರುವುದು ತಿಳಿದು ಬಂದಿದ್ದು ಇನ್ನುಳಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿ ಆಕೆಯ ಸಾವಿಗೆ ನ್ಯಾಯ ಕೊಡದಿದ್ದರೆ ರಾಜ್ಯಾದ್ಯಂತ ‘ಜಸ್ಟಿಸ್ ಫಾರ್ ಸ್ವಾತಿ’ ಅಭಿಯಾನ ಆರಂಭಿಸಲಾಗುವುದೆಂದು ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಸಿದ್ದಾರೆ.
ದೂರದ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣಕ್ಕೆ ನ್ಯಾಯ ಕೊಡಿಸಲು ಹೋರಾಡುವ ಪ್ರಜ್ಞಾವಂತರು ಈ ಅಮಾಯಕ ಮುಗ್ದ ಸ್ವಾತಿಯ ಸಾವಿಗೆ ನ್ಯಾಯ ಏಕೆ ಕೇಳಬಾರದು ಎಂದು ಪ್ರಶ್ನಿಸಿರುವ ಪಾಟೀಲರು ಈ ಬಗ್ಗೆ ಸರ್ಕಾರ ಮತ್ತು ಗೃಹಮಂತ್ರಿಗಳಿಗೆ ತುರ್ತು ಈ ಮೇಲ್ ಸಂದೇಶ ರವಾನಿಸಿ ಎಚ್ಚರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 