ಅಗತ್ಯತೆ ಆಧರಿಸಿ ಟ್ಯಾಂಕರ್ ನೀರು ಪೂರೈಸಿ
ಬೆಳಗಾವಿ, 01: ಕುಡಿಯುವ ನೀರಿನ ಬೇಡಿಕೆ ಆಧರಿಸಿ ಸಮಸ್ಯಾತ್ಮಕ ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕೋಡಿ ವಿಭಾಗದಲ್ಲಿ 131 ಹಾಗೂ ಬೆಳಗಾವಿ ವಿಭಾಗದಲ್ಲಿ 39 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದ್ದು, ಇವುಗಳ ಪೈಕಿ 26 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಬರ ಹಿನ್ನೆಲೆಯಲ್ಲಿ ಈ ಮುಂಚೆ ಕೊರೆಯಲಾಗಿರುವ ಕೊಳವೆಬಾವಿಗಳನ್ನು ಪರಿಶೀಲಿಸಿ ತಹಶಿಲ್ದಾರರ ಮೂಲಕ ವರದಿಯನ್ನು ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅದೇ ರೀತಿ ಅಗತ್ಯ ಇರುವ ಕಡೆಗಳಲ್ಲಿ ಮಾತ್ರ ತಕ್ಷಣ ಮೇವು ಬ್ಯಾಂಕ್ ಆರಂಭಿಸುವಂತೆ ಸೂಚನೆ ನೀಡಿದ ಪ್ರಾದೇಶಿಕ ಆಯುಕ್ತರು, ಮೇವು ಖರೀದಿಯಲ್ಲಿ ಮಿತವ್ಯಯ ನೀತಿ ಪಾಲಿಸುವಂತೆ ತಿಳಿಸಿದರು.
ಈಗಾಗಲೇ ಅಥಣಿಯಲ್ಲಿ ಮಾತ್ರ ಮೇವು ಬ್ಯಾಂಕ್ ಆರಂಭಿಸಲಾಗಿದ್ದು, ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಜಿಲ್ಲೆಯಲ್ಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿದರ್ೇಶಕ ಡಿ.ಎಸ್. ಹವಾಲ್ದಾರ ಸಭೆಯಲ್ಲಿ ತಿಳಿಸಿದರು.
ಬೆಳೆಹಾನಿ ಬಗ್ಗೆ ಚಚರ್ೆ:
ಕಳೆದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ಚಚರ್ೆ ನಡೆಸಿದ ತುಷಾರ್ ಗಿರಿನಾಥ್ ಅವರು, ಕೇಂದ್ರ ಬರ ಅಧ್ಯಯನ ತಂಡಗಳ ವರದಿ ಆಧರಿಸಿ ಕೇಂದ್ರ ಸಕರ್ಾರ ಈಗಾಗಲೇ ಮೊದಲ ಕಂತಿನಲ್ಲಿ ಹಣ ಬಿಡುಗಡೆಗೊಳಿಸಿದೆ ಎಂದರು.
ಮುಂಗಾರು ಹಂಗಾಮಿನಲ್ಲಿ ಆಗಿರುವ ಬೆಳೆಹಾನಿಗೆ 58.49 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಬಿಡುಗಡೆಗೆ ಮಾಡುವಂತೆ ಕೇಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ ವಿವರಿಸಿದರು.
ಪಟ್ಟಣ ಪ್ರದೇಶಗಳಿಗೆ ನೀರು ಸರಬರಾಜಿಗಾಗಿ
ಕೈಗೆತ್ತಿಕೊಂಡಂತಹ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗದಿಪಡಿಸಲಾದ ಗುರಿಯನ್ನು ತಲುಪುವ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ನಿದರ್ೇಶನ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ್, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ವಿಜಯಕುಮಾರ್ ಹೊನಕೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 