ಆಲಮಟ್ಟಿ ಜಲಾಶಯದಲ್ಲಿ ನೀರು ನಿಲ್ಲಿಸಿದರೆ ಮಾತ್ರ ನೀರಿನ ಸಮಸ್ಯೆ ನೀಗುವುದು: ಸಚಿವ ಶಿವಾನಂದ
ಲೋಕದರ್ಶನ ವರದಿ
ವಿಜಯಪುರ 09: ಆಲಮಟ್ಟಿ ಜಲಾಶಯವನ್ನು 524.256 ಮೀಟರ್ಗೆ ಎತ್ತರಿಸಿದರೆ ಮಾತ್ರ ಜಿಲ್ಲೆಯ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಮುಂಗಾರು-ಹಿಂಗಾರು ಬೆಳೆಗಳಿಗೆ ಅಗತ್ಯ ನೀರು ಸಿಗುತ್ತದೆ ಎಂದು ಆರೋಗ್ಯ ಸಚಿವ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಡ್ ಮೂಲಕವಾದರೂ ಹಣ ಸಂಗ್ರಹಿಸಿ ಜಲಾಶಯ ಎತ್ತರಿಸುವ ಕೆಲಸ ಕೈಗೊಳ್ಳಬೇಕು. ಈ ಕುರಿತಂತೆ ಶನಿವಾರ ಆಲಮಟ್ಟಿಯಲ್ಲಿ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರ್ರಸ್ತುತ ಎದುರಾಗಿರುವ ನೀರಿನ ಸಮಸ್ಯೆಗೆ ಜಲಾಶಯ ಎತ್ತರಿಸದಿರುವುದೇ ಕಾರಣ. ಒಂದು ವೇಳೆ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು 524.256 ಮೀಟರ್ಗೆ ಎತ್ತರಿಸಿದರೆ ಅಗತ್ಯ ನೀರು ಲಭ್ಯವಾಗುತ್ತದೆ. ಜಲಾಶಯ ಎತ್ತರಿಸುವ ಬಗ್ಗೆ ತಾವು ಕೂಡ ಸರಕಾರದ ಗಮನ ಸೆಳೆಯುವುದಾಗಿ ಹೇಳಿದರು.
ಮಾಚರ್್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಪಾದಯಾತ್ರೆ ಕೈಗೊಂಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಲುವೆಗೆ ನೀರು ಹರಿಸಿ ಎಂದು ಯಾರೂ ಪಾದಯಾತ್ರೆ ಕೈಗೊಂಡಿಲ್ಲ. ಶಾಸಕ ನಡಹಳ್ಳಿ ಕೂಡ ನೀರಾವರಿ ಸಲಹಾ ಸಮಿತಿ ಸದಸ್ಯರಿದ್ದು, ಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮಂಡಿಸಬಹುದು ಎಂದು ಎಂದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 