ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲ, ದೇಶದಿಂದಲೇ ಹೊರಹಾಕುತ್ತೆವೆ
We will not only remove infiltrators from the voter list, but also from the country itself.
ಗುವಾಹಟಿ: ಭಾರತವು ನಕ್ಸಲರಿಂದ ಮುಕ್ತವಾಗಲು ಸಾಧ್ಯವಾದರೆ, ನುಸುಳುಕೋರರಿಂದಲೂ ಮುಕ್ತವಾಗಲು ಸಾಧ್ಯ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲದೆ ದೇಶದಿಂದಲೇ ಹೊರಹಾಕುತ್ತೇವೆ ಎಂದು ಶನಿವಾರ ಹೇಳಿದ್ದಾರೆ. ಅಸ್ಸಾಂ ಪೊಲೀಸ್ನ 10ನೇ ಬೆಟಾಲಿಯನ್ನ ಹೊಸ ಕ್ಯಾಂಪಸ್ಗೆ ಅಡಿಪಾಯ ಹಾಕಿದ ನಂತರ ಶಾ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ನುಸುಳುಕೋರರ ಅತಿಕ್ರಮಣಗಳಿಂದ ಮುಕ್ತವಾದ ಭೂಮಿಯಲ್ಲಿ ಇದನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದ ಶಾ, ನುಸುಳುಕೋರರನ್ನು ಓಡಿಸುವುದಾಗಿ ಈ ಹಿಂದೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ, ಅವರು ಆ ಕೆಲಸ ಮಾಡಲಿಲ್ಲ. ಏಕೆಂದರೆ, ನುಸುಳುಕೋರರು ಕಾಂಗ್ರೆಸ್ನ ವೋಟ್ಬ್ಯಾಂಕ್ ಎಂದು ಕುಟುಕಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 