ಪ್ರತಿಭಟನೆಯ ಸ್ವಾಗತ: ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ
ಗುವಾಹತಿ, ಜ 8 ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪುನರುಚ್ಚರಿಸಿರುವ ನಾರ್ತ್ ಈಸ್ಟ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎನ್ಇಎಸ್ಓ), ಪ್ರಧಾನಿ ನರೇಂದ್ರ ಮೋದಿ ಈ ಭಾಗಕ್ಕೆ ಬಂದರೆ ಅವರಿಗೆ ಪ್ರತಿಭಟನೆ ಸ್ವಾಗತ ನೀಡುವುದಾಗಿ ಹೇಳಿಕೊಂಡಿದೆ. ನೆಸೊ ಸಂಘಟನೆಯಲ್ಲಿ ಸೇರಿರುವ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಆಫ್ ಅಸ್ಸಾಂ (ಆಸು) ಮುಖಂಡ ಸಮುಜ್ಜಲ್ ಭಟ್ಟಾಚಾರ್ಯ ಈ ಕುರಿತು ಹೇಳಿಕೆ ನೀಡಿ,ನಾವು ಇದೇ 10 ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಹಾಗೂ ಖೇಲೋ ಇಂಡಿಯಾ ಯುವ ಕ್ರೀಡಾಕೂಟಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂಗೆ ಭೇಟಿ ನೀಡಿದರೆ,ಮಾತ್ರ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತೇವೆ ಶಾಂತಿಯುತ ಗಾಂಧೀಜಿ ಮಾದರಿಯ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ . ಸಿಎಎ ಧರ್ಮ ಧರಿತವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಸಹಿಸಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 