ಪಶ್ಚಿಮ ಬಂಗಾಳ: ದಿಡೀರ್ ಕೆಲಸಕ್ಕೆ ರಾಜಿನಾಮೆ ಕೊಟ್ಟ 400 ದಾದಿಯರು..!!
ಕೊಲ್ಕತ್ತಾ , ಮೇ, 18,ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಅದರಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವಾಗಲೇ ಸುಮಾರು 400 ದಾದಿಯರು ಕೆಲಸಕ್ಕೆ ರಾಜೀನಾಮೆ ನೀಡಿರುವ ಆಘಾತಕಾರಿ ಸುದ್ದಿ ಹೊರ ಬಂದಿದೆ. 185 ದಾದಿಯರು ಶನಿವಾರ ಮಣಿಪುರಕ್ಕೆ ಹಿಂದಿರುಗಿದ್ದರೆ, ಇನ್ನೂ 186 ಮಂದಿ ಒಡಿಶಾ, ಜಾರ್ಖಂಡ್, ಛತ್ತೀಸ್ಗಡ ಮತ್ತು ಇತರ ರಾಜ್ಯಗಳತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ದಾದಿಯರೆಲ್ಲರೂ ಕೋಲ್ಕತಾ ಸೇರಿದಂತೆ ರಾಜ್ಯಾದ್ಯಂತ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಈ ರೀತಿಯಾಗಿ ರಾಜೀನಾಮೆ ನೀಡಿರುವುದಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ . ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸಾವಿನ ಸಂಖ್ಯೆ 232ಕ್ಕೆ ಏರಿಕೆಯಾಗಿರುವ ನಡುವೆಯೇ ಈ ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯ ಸರ್ಕಾರ ದಿಗಿಲುಗೊಂಡಿದ್ದು, ಅವರ ಮನ ಒಲಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 