ಪಶ್ಚಿಮ ಬಂಗಾಳ : ಅಂಫಾನ್ ಹಾನಿ ಪರಿಶೀಲನೆಗೆ ಶೀಘ್ರದಲ್ಲೆ ಕೇಂದ್ರ ತಂಡ
ನವದೆಹಲಿ, ಮೇ 26,ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದಿಂದ ಉಂಟಾಗಿರುವ ಹಾನಿಯ ವ್ಯಾಪ್ತಿಯನ್ನು ನಿರ್ಣಯಿಸಲು ಸರ್ಕಾರ ಶೀಘ್ರದಲ್ಲೇ ಕೇಂದ್ರ ತಂಡವನ್ನು ಕಳುಹಿಸುತ್ತಿದೆ. ಪರಿಹಾರ ಮತ್ತು ಪುನರ್ವಸತಿಗೆ ಸಂಬಂಧಿಸಿದ 'ಎಲ್ಲ ಸಹಾಯ' ಮಾಡುವುದಾಗಿ ಕೇಂದ್ರವು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ."ವಿದ್ಯುತ್ ಮತ್ತು ಟೆಲಿಕಾಂ ಸೇವೆಗಳನ್ನು ಪುನಃಸ್ಥಾಪಿಸಲು ಆದ್ಯತೆ ನೀಡಲಾಗುವುದು, ಇದು ರಾಜ್ಯವನ್ನು ಸಾಮಾನ್ಯ ಸ್ಥಿತಿಗೆ ಮರಳಲು ಸಹಾಯ ಮಾಡುತ್ತದೆ" ಎಂದು ಮೂಲಗಳು ತಿಳಿಸಿವೆ.ಇದೇ ತಿಂಗಳ 2 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಅಪ್ಪಳಿಸಿತ್ತು. ತತ್ಪರಿಣಾಮ ಪಶ್ಚಿಮ ಬಂಗಾಳದಲ್ಲಿ 86 ಜನರು ಮೃತಪಟ್ಟಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಡನೆ ಚಂಡಮಾರುತ ಪೀಡಿತ ಸ್ಥಳಗಳ ವೈಮಾನಿಕ ಸಮೀಕ್ಷೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ತತ್ ಕ್ಷಣದ ಪರಿಹಾರವಾಗಿ ಒಂದು ಸಾವಿರ ಕೋಟಿ ರೂಪಾಯಿಗಳ ನೆರವು ಘೋಷಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 