ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ನಾಲ್ಕನೇ ರಾಜ್ಯವಾಗಲಿರುವ ಪಶ್ಚಿಮ ಬಂಗಾಳ
ನವದೆಹಲಿ, ಜ 27 : ಇತರ ಕಾಂಗ್ರೆಸ್ ಆಡಳಿತ ಮತ್ತು ಎಡಪಕ್ಷಗಳ ಆಡಳಿತವಿರುವ ರಾಜ್ಯಗಳ ಹಾದಿಯಲ್ಲೇ ಸಾಗಿರುವ ಪಶ್ಚಿಮ ಬಂಗಾಳ ಸರ್ಕಾರ, ಸೋಮವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡಿಸಲಿದೆ.
ಇದರಿಂದ ಪಶ್ಚಿಮ ಬಂಗಾಳ, ಕೇರಳ, ಪಂಜಾಬ್ ಮತ್ತು ರಾಜಸ್ತಾನದ ನಂತರ ಸಿಎಎ ವಿರುದ್ಧ ನಿರ್ಣಯ ಮಂಡಿಸಲಿರುವ ನಾಲ್ಕನೇ ರಾಜ್ಯವಾಗಲಿದೆ.
ಸೋಮವಾರ ಸಿಎಎ ವಿರುದ್ಧ ಅಧಿಕೃತ ನಿರ್ಣಯ ಮಂಡಿಸಲಾಗುವುದು. ಎಲ್ಲಾ ಪಕ್ಷಗಳು ಅವಿರೋಧವಾಗಿ ಇದಕ್ಕೆ ಬೆಂಬಲ ಸೂಚಿಸುತ್ತವೆ ಎಂದು ನಂಬಿದ್ದೇವೆ ಎಂದು ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಜ. 21ರಂದು ಮಾಹಿತಿ ನೀಡಿದ್ದರು.
ಈ ನಿರ್ಣಯವನ್ನು ಬೆಂಬಲಿಸಿರುವ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು, ವಿಳಂಬವಾದರೂ ಉತ್ತಮ ನಿರ್ಧಾರ ಎಂದಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 