ಆರ್ಎಸ್ಎಸ್ ಗೆ ಊಟ ಹಾಕಲು ನೀವೇನು ಟಾಟಾ-ಬಿರ್ಲಾನಾ : ಆರ್.ಅಶೋಕ್ ಪ್ರಶ್ನೆ
ಬೆಂಗಳೂರು,ಫೆ 10: ಆರ್ ಎಸ್ಎಸ್ ನವರಿಗೆ ಊಟ ಹಾಕುತ್ತೇವೆ ಎನ್ನುತೀರಲ್ಲಾ ನೀನೇನು ಟಾಟಾನಾ, ಬಿರ್ಲಾನಾ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದವರಿಗೆ ನೀವೇನು ಊಟ ಹಾಕಿಸೋ ಅಗತ್ಯತೆ ಇಲ್ಲ. ಆ ನೈತಿಕತೆಯೂ ಅವರಿಗಿಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಅಹಂಕಾರದ ಪರಮಾವಧಿ.ಅವರು ಊಟ ಹಾಕುವುದಾ ದರೆ,ಈಗ ಹಲವು ಕಾಂಗ್ರೆಸ್ ನಾಯಕರು ನಿರ್ಗತಿಕರಾಗಿದ್ದಾರೆ. ಫುಟ್ ಪಾತ್ ನಲ್ಲಿರುವ ಕಾಂಗ್ರೆಸ್ ನವರಿಗೆ ಊಟ ಹಾಕಿಸಲಿ ಎಂದು ವಾಗ್ದಾಳಿ ನಡೆಸಿದರು.
ರಾಮನಗರ ಭಾಗದಲ್ಲಿ ಹಿಂದೂ ಚಟುವಟಿಕೆಗಳು ಹೆಚ್ಚಾಗುತ್ತಿರುವುದರಿಂದ ಡಿ.ಕೆ.ಶಿವಕುಮಾರ್ ಹೆದರಿದ್ದಾರೆ.ಅವರಿಗೆ ಈಗ ಉಳಿದು ಕೊಂಡಿರುವುದು ಕನಕಪುರ ಕ್ಷೇತ್ರ ಒಂದೇ. ಮೊದಲು ಅವರು ಆ ಕ್ಷೇತ್ರವನ್ನು ಉಳಿಸಿಕೊಳ್ಳಲಿ ಎಂದು ಲೇವಡಿ ಮಾಡಿದರು.
ಕಪಾಲಬೆಟ್ಟದ ಸುತ್ತಮುತ್ತಲ ಪ್ರದೇಶಗಳಲ್ಲಿ ಮತಾಂತರ ಚಟುವಟಿಕೆಗಳು ತೀವ್ರಗೊಂಡಿರೋದು ನಿಜ.ಒಂದೇ ಕೋಮಿನ ಜನರಿಗೆ ಭೂಮಿ ಹಂಚಲಾ ಗುತ್ತಿದೆ.ಅಲ್ಲದೆ ಸರ್ಕಾರಿ ಭೂಮಿ ಲಪಟಾಯಿಸುವ ಹುನ್ನಾರವೂ ನಡೆದಿದೆ.ನಾವೆಲ್ಲ ಮುನೇಶ್ವರನ ಆರಾಧಕರು.ಡಿ.ಕೆ.ಶಿವಕುಮಾರ್ ಕೂಡ ಮುನೇಶ್ವರನ ಭಕ್ತರೇ.ಹಾಗಾಗಿ ಮುನೇಶ್ವರಬೆಟ್ಟವನ್ನು ಉಳಿಸಿಕೊಳ್ಳುತ್ತೇವೆ.ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.
ನಾನು ಕಂದಾಯ ಖಾತೆಯನ್ನು ಉಳಿಸಿಕೊಂಡು ಹೆಚ್ಚುವರಿಯಾಗಿರುವ ಪೌರಾಡಳಿತ ಖಾತೆಯನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 