ನಾಯಕರು ಹೇಳುವುದೇ ಬೇರೆ, ಮತದಾರರು ಹೇಳುವುದೇ ಬೇರೆ
ಮುಂಬೈ, ಅ 12: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರ ನಡುವೆ ಕೆಸರೆರಚಾಟ ತಾರಕಕ್ಕೆ ಮುಟ್ಟಿದೆ. ಆರೋಪ ಮತ್ತು ಪ್ರತ್ಯಾರೋಪಗಳು ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಭಿವೃದ್ಧಿಯ ವಿಚಾರಗಳನ್ನು ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರೂ ರಾಜ್ಯದ ಮತದಾರರು ಹೇಳುವುದೇ ಬೇರೆಯಾಗಿದೆ. ಮುಂಬೈನ ಮತದಾರರೊಬ್ಬರು ಚುನಾವಣೆಯ ಬಗ್ಗೆ ಮಾತನಾಡಿ, ಮುಂಬೈ ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಇದನ್ನು ನಿವಾರಿಸಬೇಕು. ಜಗತ್ತಿನ ಪ್ರಮುಖ ವಾಸಯೋಗ್ಯ ನಗರವನ್ನಾಗಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ರಾಜ್ಯದ ಮತ್ತೊಬ್ಬ ಮತದಾರ ಮಾತನಾಡಿ, ರಾಜ್ಯದಲ್ಲಿ ರೈತರ ಪರಿಸ್ಥಿತಿ ಶೋಚನೀಯವಾಗಿದೆ. ನಗರ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ. ಬಿಜೆಪಿ ಮತ್ತು ಶಿವಸೇನೆ ಐದು ವರ್ಷಗಳ ಕಾಲ ಅಧಿಕಾರ ಮಾಡಿದ್ದರೂ ರಾಜ್ಯದಲ್ಲಿ ಹೇಳಿಕೊಳ್ಳುವ ಪ್ರಗತಿ ಆಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 