ಅಕ್ಕಿ ಗಾಗಿ ಜನಜಂಗುಳಿ, ಹೊಸಕೋಟೆ ಪೊಲೀಸರೆ ಎಲ್ಲಿದ್ದಿರೀ
ದೇವನಹಳ್ಳಿ, ಏ 16, ಹೊಸಕೋಟೆಯಲ್ಲಿ ಪೊಲೀಸರು ಇಲ್ಲವೇ ? ಇದ್ದರೂ ಅವರು ತಮ್ಮ ಪಾಲಿನ ಕೆಲಸ ಕೆಲಸ ಮರೆತು ಬಿಟ್ಟರೆ? ನಿಮ್ಮ ಅಕ್ಕಪಕ್ಕ ಅದೂ ಎಡ, ಬಲ ರಾಜರೋಷವಾಗಿ ನಿಯಮ ಉಲ್ಲಂಘನೆ ಮಾಡಿ ಸಾಮಾಜಿಕ ಅಂತರವಿಲ್ಲದೆ ಜನರು ಒಬ್ಬರ ಮೇಲೆ ಬೀಳುವಂತಹ ಪರಿಸ್ಥಿತಿ ಬಂದರೂ ಕೇಳುವವರಿಲ್ಲವೆ? ನೋಡುವವರಿಲ್ಲವೆ? ? ಬಡವರಿಗೆ ಒಂದು ನ್ಯಾಯ, ಬಲಾಡ್ಯರಿಗೆ ಒಂದು ನ್ಯಾಯವೇ ಒಂದೇ ಸ್ಥಳದಲ್ಲಿ ಸಾವಿರಾರು ಜನ ಸೇರಿದ್ದಾರೆ ಹೊಸಕೋಟೆ ನಗರದ 31 ನೇ ವಾರ್ಡ್ ನಲ್ಲಿ ನಿಯಮ ಉಲ್ಲಂಘನೆಯಾಗಿದೆ, ಮಾಜಿ ಸಚಿವ ಎಂಟಿಬಿ ನಾಗರಾಜ್ ಅಕ್ಕಿ ವಿತರಣೆ ಮಾಡಿದಾಗ ಸೇರಿದ್ದ ಜನಜಂಗುಳಿ ನಿಮ್ಮ ಗಮನಕ್ಕೆ ಬರಲಿಲ್ಲವೆ? ಹೊಸಕೋಟೆ ತಾಲೂಕಿನಲ್ಲಿ ಈಗಾಗಲೇ 4 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿ, ಡೇಂಜರ್ ವಲಯವಾಗಿದ್ದರೂ ಪೋಲಿಸರು ಸರಿಯಾಗಿ ಗಮನ ಕೊಡದಿರುವ ಕಾರಣ ಜನ ಸಾಗರೋಪಾದಿಯಲ್ಲಿ ಸೇರಿದ್ದು ಎಲ್ಲರಿಗೂ ಗೊತ್ತಾಗಿರುವಾಗ ನಿಮಗೆ ಗೊತ್ತಾಗಲಿಲ್ಲವೇ , ಅಥವಾ ನಿಮ್ಮ ಗಮನಕ್ಕೆ ಬಾರದೆ ಕಾರ್ಯಕ್ರಮ ನಡೆಯಿತೆ ಎಂಬ ಅನುಮಾನ ಸಹ ಕಾಡುತ್ತಿದೆ .
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 