ಪ್ರಿಯರಕನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ: ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್
Wife kills husband with lover: Dismembers body, puts it in a drum and seals it with cement
ಲಕ್ನೋ 19: ಪ್ರಿಯರಕನ ಜತೆ ಸೇರಿ ಪತ್ನಿಯೇ ನೌಕಾಧಿಕಾರಿ ಗಂಡನ ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ..
ಸೌರಭ್ ಇತ್ತೀಚೆಗಷ್ಟೇ ಲಂಡನ್ನಿಂದ ಮೀರತ್ಗೆ ಬಂದಿದ್ದ. 2016ರಲ್ಲಿ ಪ್ರೀತಿಸಿ ಮುಸ್ಕಾನ್ ಎನ್ನುವವಳ ಜತೆ ಸೌರಭ್ ವಿವಾಹವಾಗಿದ್ದ. ಮೊದಲು ಮರ್ಚೆಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದ ಸೌರಭ್ ಆ ಬಳಿಕ ಲಂಡನ್ಗೆ ತೆರಳಿ ಮಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತ ಮುಸ್ಕಾನ್ ತನ್ನ 5 ವರ್ಷದ ಮಗಳ ಜತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು.
ಗಂಡ ಲಂಡನ್ನಲ್ಲಿದ್ದಾಗ ಇತ್ತ ಮುಸ್ಕಾನ್ ಗೆ ಸಾಹಿಲ್ ಶುಕ್ಲಾ ಎನ್ನುವವನ ಜತೆ ಸಂಬಂಧ ಇಟ್ಟುಕೊಂಡಿದ್ದಳು. ಲಂಡನ್ನಿಂದ ತನ್ನ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಐದು ವರ್ಷದ ಮಗಳು ಪಿಹುಳ ಹುಟ್ಟುಹಬ್ಬ ಆಚರಿಸಲು ಸೌರಭ್ ಕುಮಾರ್ ಮೀರತ್ಗೆ ಬಂದಿದ್ದ.
ಇದೇ ವೇಳೆ ಮುಸ್ಕಾನ್ ಪ್ರಿಯಕರ ಸಾಹಿಲ್ ಜತೆ ಸೇರಿ ಸೌರಭ್ನ ಪ್ರಾಣ ತೆಗೆಯಲು ಪ್ಲ್ಯಾನ್ ಮಾಡಿದ್ದಾರೆ. ಮಾರ್ಚ್ 4 ರಂದು ಸೌರಭ್ನ ಎದೆಗೆ ಚಾಕುವಿನಿಂದ ಚುಚ್ಚಿ ಆತನ ಪ್ರಾಣವನ್ನು ತೆಗೆಯಲಾಗಿದೆ.
ದೇಹವನ್ನು ಸೀಳಿ ಅದನ್ನು 15 ತುಂಡುಗಳಾಗಿ ಕತ್ತ*ರಿಸಿ, ಪ್ಲ್ಯಾಸ್ಟಿಕ್ ಚೀಲದಲ್ಲಿ ತುಂಬಿದ್ದಾರೆ. ಆ ನಂತರ ಅದನ್ನು ಡ್ರಮ್ನಲ್ಲಿ ಹಾಕಿದ್ದಾರೆ. ಡ್ರಮ್ಗೆ ಸಿಮೆಂಟ್ ತುಂಬಿಸಿದ್ದಾರೆ. ಕೃತ್ಯ ನಡೆದ ನಂತರ ಮುಸ್ಕಾನ್ ಸಾಹಿಲ್ ಜೊತೆ ಪರಾರಿಯಾಗಿದ್ದಾಳೆ. ಮಗಳನ್ನು ತಾಯಿ ಮನೆಯಲ್ಲಿ ಬಿಟ್ಟು ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 