ಜಲಾಶಯದ ನೀರಿನಲ್ಲಿ ಕಾಡಾನೆ ಸಾವು
Wild elephant dies in reservoir water
ದಾಂಡೇಲಿ ಮೆ 26: ದಾಂಡೇಲಿ ಸಮೀಪದ ಬೊಮ್ಮನಹಳ್ಳಿ ಜಲಾಶಯದ ನೀರಿನಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕಾಡಾನೆಗೆ 24 ವರ್ಷ ವಯಸ್ಸಾಗಿದ್ದು, ಮೃತ ಆನೆ ಗಂಡಾನೆಯಾಗಿದೆ. ಆನೆ ನೀರಿನಲ್ಲಿ ಸಾವನ್ನಪ್ಪಿರುವದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸಿದರು. ನಂತರ ಆನೆಯ ಮೃತ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವೀಗೀಡಾದ ಆನೆಯ ಅಂತ್ಯ ಸಂಸ್ಕಾರ ಮಾಡಲಾಯಿತು. ಕಳೆದ ವರ್ಷ ವಿದ್ಯುತ್ ಸ್ಪರ್ಷದಿಂದ ಇದೇ ಕಾಡಿನಲ್ಲಿ ಆನೆಯೊಂದು ಸಾವನ್ನಪ್ಪಿತ್ತು. ಇದೀಗ ಮತ್ತೊಂದು ಕಾಡಾನೆ ಸಾವನ್ನಪ್ಪಿದೆ. ಕಾಡಾನೆಗಳ ಸಾವು ಈ ಭಾಗದಲ್ಲಿ ಪರಿಸರಾಸಕ್ತರಲ್ಲಿ ಆತಂಕ ಮೂಡಿಸಿದ್ದು ವನ್ಯಜೀವಿ ಇಲಾಖೆ ಈ ಕುರಿತು ಸಮಗ್ರ ಪರೀಶೀಲನೆಯೊಂದಿಗೆ ಕಾಡಾನೆಗಳ ರಕ್ಷಣೆಗೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 