ಮಾಧುಸ್ವಾಮಿ ವಿರುದ್ಧ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿ: ಬಿಎಸ್ಪಿ
ಬೆಂಗಳೂರು, ಮೇ, ರೈತ ಮಹಿಳೆಗೆ ಅಶ್ಲೀಲವಾಗಿ ಟೀಕಿಸಿರುವ ಸಂಬಂಧ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಳ್ಳಬೇಕು. ಜೊತೆಗೆ, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.ನಗರದಲ್ಲಿಂದು ಬಿಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ, ಮಾಧುಸ್ವಾಮಿಯವರ ಈ ವರ್ತನೆಯನ್ನು ಖಂಡಿಸಿ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯದಲ್ಲಿ ಅನೇಕ ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅಲ್ಲದೆ, ಮಾಧುಸ್ವಾಮಿ ಕ್ಷಮಿಸಲು ಸಾಧ್ಯವಾಗದ ವರ್ತನೆಯನ್ನು ತೋರಿದ್ದಾರೆ ಹೇಳಿದರು.ಸಚಿವರಾಗಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಜನಗಳ ಸಮಸ್ಯೆಯನ್ನು ಹೇಳುವಾಗ ಮಹಿಳೆಯ ಬಗ್ಗೆ ಬಹಳ ಅಗೌರವದಿಂದ ಮಾತನಾಡಿದ ಮಾಧುಸ್ವಾಮಿ ಅವರನ್ನು ಈ ಕೂಡಲೇ ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಬೇಕು. ಇಲ್ಲದಿದ್ದಲ್ಲಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 