ವರದಕ್ಷಿಣೆಗಾಗಿ ಮಹಿಳೆ ಹತ್ಯೆ
ಹಾಜಿಪುರ, ಡಿ 20: ವರದಕ್ಷಿಣೆ ಪಿಡುಗು ಇನ್ನೂ ನಿರ್ಮೊಲನೆಯಾಗಿಲ್ಲ ಎಂಬುದಕ್ಕೆ ದೇಶದ ವಿವಿಧೆಡೆಯಿಂದ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿವೆ ಈ ನಿಟ್ಟಿನಲ್ಲಿ ವೈಶಾಲಿ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುಜಾಫಪುರ್ ಮಲಾಹಿ ಗ್ರಾಮದಲ್ಲಿ ವರದಕ್ಷಿಣೆಗಾಗಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಲಾಗಿದೆ.
ಬೆಗುಸರೈ ಜಿಲ್ಲೆಯ ಬಚ್ವಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ಚಮತ ಲಕ್ಷ್ಮಣ್ ತೋಲಾದ ಉಮೇಶ್ ಪಾಸ್ವಾನ್ ಅವರ ಪುತ್ರಿ ಕಾಜಲ್ ದೇವಿ (22) ಹತ್ಯೆಗೀಡಾದ ದುರ್ದೈವಿ.
ಈಕೆ ಎಂಟು ವರ್ಷಗಳ ಹಿಂದೆ ವೈಶಾಲಿ ಜಿಲ್ಲೆಯ ಮುಜಫಪುರ್ ಮಲಾಹಿ ಗ್ರಾಮದ ಸಂಜಯ್ ಪಾಸ್ವಾನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದ, ಕಾಜಲ್ಗೆ 50 ಸಾವಿರ ರೂ. ವರದಕ್ಷಿಣೆ ತರಲು ಹಿಂಸೆ ನೀಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ತಂದೆ ಉಮೇಶ್ ಪಾಸ್ವಾನ್ ಅವರ ಹೇಳಿಕೆಯ ಆಧಾರದ ಮೇಲೆ ಮೃತಳ ಪತಿ ಸಂಜಯ್ ಪಾಸ್ವಾನ್, ಅವರ ತಂದೆ, ತಾಯಿ ಸೇರಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮಾಹಿತಿ ನೀಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 