ಮಹಿಳೆಯರು ಶರಣರ ಸಂಸ್ಕೃತಿ ಅಳವಡಿಸಿಕೊಳ್ಳಲಿ: ಡಾ. ಮೈತ್ರೇಯಿಣಿ
ಲೋಕದರ್ಶನ ವರದಿ
ಬೆಳಗಾವಿ, 31: ಮಹಿಳೆಯರು ಶರಣ ಸಂಸ್ಕೃತಿ ಆಧಾರದ ಮೇಲೆ ಬದುಕು ಅನಾವರಣಗೊಳಿಸಿ ಸ್ತ್ರೀ ಅಸ್ಮಿತೆಯನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಅವರು ಶನಿವಾರ ಸಂಜೆ ನಗರದ ಮಹಾಂತೇಶ ನಗರದ ಮಹಾಂತೇಶ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಮುಖ್ಯ ಅಥಿತಿಯಾಗಿ ಆಗಮನಿಸಿ ``ಬುದುಕು- ಅನಾವರಣ" ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದವರು. ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಆದರೂ ಇನ್ನೂ ಅನೇಕ ಕಡೆ ಮಹಿಳೆ ಮುಜುಗರ ಬಿಟ್ಟು ಸಾಧನೆ ಮಾಡಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಅನಿತಾ ದೇಸಾಯಿ ವಹಿಸಿಕೊಂಡಿದರು.
ಈ ವೇಳೆ ಬಸವೇಶ್ವರ ಕೋ-ಆಫ್ ಬ್ಯಾಂಕ್ ಬೆಳಗಾವಿ ಇದರ ಮಹಿಳಾ ನಿದರ್ೇಶಕಿಯಾಗಿ ನೇಮಕಗೊಂಡ ದೀಪಾ ಕುಡಚಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ನಿಮಿತ್ಯ ಮಹಿಳೆಯರು ಭಾರತದ ವಿವಿಧ ಪ್ರಾಂತ್ಯಗಳ ವೇಶಭೂಷಣ ಧರಿಸಿ. ವಿವಿಧ ಮನೋರಂಜನೆ ಕಾರ್ಯಕ್ರಮ ಪಾಲ್ಗೊಂಡರು.
ಶೈಲಜಾ ಬಿಂಗೆ ಗೌರವ ಉಪಸ್ಥಿತರಿದರು. ಕಾರ್ಯಕ್ರಮವನ್ನು ಪ್ರತಿಭಾ ಕಳ್ಳಿಮಠ ನಿರೂಪಿಸಿದರು.ಲಲಿತಾ ಪಾಟೀಲ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 