19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ಡಿ.ಎಂ. ಐಹೊಳೆ
Work on filling 39 lakes across 19 villages with water is underway: MLA D.M. Aihole
ರಾಯಬಾಗ 11: ರಾಯಬಾಗ ವಿಧಾನಸಭಾ ಕ್ಷೇತ್ರದ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯಡಿ ಈಗಾಗಲೇ ಮೂರು ಪಂಪ್ಮೋಟಾರ್ಗಳನ್ನು ಚಾಲನೆ ಮಾಡಲಾಗಿದ್ದು, ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ಹರಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಡಿ.ಎಂ. ಐಹೊಳೆ ತಿಳಿಸಿದರು.
ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪರೀಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಡಿಸೆಂಬರ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಯೋಜನೆಗೆ ಚಾಲನೆ ನೀಡಿದ್ದರು.
ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅದರಂತೆ ಪಂಪ್ಮೋಟಾರ್ಗಳನ್ನು ಕಾರ್ಯಾರಂಭಗೊಳಿಸಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದರು.
ಕೆರೆಗಳು ತುಂಬುವುದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿದೆ. ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮಗಳಿಗೆ ಈ ಯೋಜನೆ ವರದಾನವಾಗಲಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 