ಮಾನವೀಯತೆಯಿಂದ ಕೆಲಸ ಮಾಡಿ: ಪೊಲೀಸರಿಗೆ ಭಾಸ್ಕರ್ರಾವ್ ಸೂಚನೆ
ಬೆಂಗಳೂರು, ಏ.14,ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರು ವಾರಗಳಲ್ಲಿ ಪೊಲೀಸ್ ಸಿಬ್ಬಂದಿಯ ಸೇವೆಗೆ ಸರ್ಕಾರ ಹಾಗೂ ಸಾರ್ವಜನಿರಿಂದ ಪ್ರಶಂಸೆ ಕೇಳಿಬಂದಿದೆ.ಕಳೆದ ಮೂರು ವಾರಗಳಿಂದ ಸಾರ್ವಜನಿಕರು ಸಹಕಾರ ಕೊಟ್ಟಿದ್ದಾರೆ, ಹೀಗಾಗಿ ಮಾಧ್ಯಮದವರು, ತರಕಾರಿ ಮಾರಾಟ ಮಾಡುವವರು, ಪೌಲ್ಟ್ರಿ ಉತ್ಪನ್ನ ಮಾರಾಟ ಮಾಡುವವರಿಗೆ ಪೊಲೀಸ್ ಸಿಬ್ಬಂದಿ ಯಾವುದೇ ತೊಂದರೆ ಕೊಡಬಾರದು. ಎಪಿಎಂಸಿಗೆ ದೊಡ್ಡ ದೊಡ್ಡ ಟ್ರಕ್ಗಳಲ್ಲಿ ಅಗತ್ಯ ವಸ್ತುಗಳು ಬರುತ್ತಿವೆ, ಅವುಗಳಿಗೆ ತೊಂದರೆ ಕೊಡಬಾರದು, ಖಾಲಿ ಟ್ರಕ್ಗಳು ಹೋಗುವುದು, ಬರುವುದು ಮಾಡುತ್ತಿವೆ, ಅವುಗಳಿಗೂ ತೊಂದರೆ ಕೊಡಬಾರದು ಎಂದು ಸೂಚಿಸಿದ್ದಾರೆ.
ಗೂಡ್ಸ್ ವಾಹನಗಳಿಗೆ ಯಾವುದೆ ತೊಂದರೆ ಕೊಡಬಾರದು. ಎಪಿಎಂಸಿಗೆ ಬರುವ ಹಮಾಲಿಗಳಿಗೆ, ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆ ಕೊಡಬಾರದು ಎಂದು ಪೊಲೀಸ್ ಸಿಬ್ಬಂದಿಗೆ ನಿರ್ದೇಶಿಸಿದ್ದಾರೆ.ಡಯಾಲಿಸಿಸ್, ಗರ್ಭಿಣಿ ಮಹಿಳೆಯರಿಗೆ, ಕಿಮೊಥೆರಪಿಗೆ ಹೋಗುವವರಿಗೆ ಪಾಸ್ ಇಲ್ಲದೆ ಇದ್ದರೂ ಅವಮಾನ ಮಾಡಬಾರದು. ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಬಾರದು. ಟ್ಯಾಂಕರ್ ನೀರು, ವಿದ್ಯುತ್, ಸರ್ಕಾರಿ ಸಿಬ್ಬಂದಿಗೆ ಅವಕಾಶ ಕೊಡಬೇಕು. ಪಾಸ್ ಚೆಕ್ ಮಾಡುತ್ತಿರಬೇಕು, ನಕಲಿ ಪಾಸ್, ಝೆರಾಕ್ಸ್ ಪಾಸ್ಗಳನ್ನು ಪತ್ತೆ ಮಾಡಬೇಕು.ಪ್ರತಿದಿನ ಪ್ರತಿ ಪೊಲೀಸ್ ಸಿಬ್ಬಂದಿಗೆ 3 ಲೀಟರ್ ನೀರು, 4 ಕಿತ್ತಳೆ ಹಣ್ಣುಗಳನ್ನು ಸೇವಿಸಲು ಒದಗಿಸಬೇಕು. ಯಾವುದೇ ಸಮಸ್ಯೆ ಇದ್ದರೂ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಮೌಖಿಕವಾಗಿ ದೂರವಾಣಿ ಮೂಲಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 