ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
World Anti-Drug Day: Raibag
ರಾಯಬಾಗ, 26 : ಯುವಕರು ಮಾದಕ ಪದಾರ್ಥ ಸೇವನೆಯಿಂದ ದಾರಿ ತಪ್ಪುತ್ತಿರುವುದರಿಂದ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ ಎಂದು ಪಿಎಸ್ಐ ನರಸಿಂಹರಾಜು ಹೇಳಿದರು.
ಗುರುವಾರ ತಾಲೂಕಿನ ನಸಲಾಪುರ ಗ್ರಾಮದ ಗುಂಡಪ್ಪ ಕಾಂತೆ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಹದಿಹರೆಯದ ಯುವ ಜನಾಂಗ ಮಾದಕ ವಸ್ತುಗಳ ವ್ಯಸನರಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಪಾಲಕರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಹರಿಸಿ, ಅವರು ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕೆಂದರು.
ತಾಲೂಕು ಯೋಜನಾಧಿಕಾರಿ ಮಹೇಶ್ವರ್ಪ ಜಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಎಸ್ ಕೆ ಮಾಲಗಾಂವೆ ಅವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಆರ್ ಡಿ ಪಾಟೀಲ್, ಜನಜಾಗೃತಿ ವೇದಿಕೆ ಸದಸ್ಯ ಜಿನೇಂದ್ರ ಖೆಮಲಾಪುರೆ, ವಲಯ ಮೇಲ್ವಿಚಾರಕಿ ಮಂಜುಳಾ ಚಂದ್ರಶೇಖರ, ಕೃಷಿ ಮೇಲ್ವಿಚಾರಕ ಗೋಪಾಲ ಕುಂಬಾರ, ಸೇವಾ ಪ್ರತಿನಿಧಿ ಜಯಶ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 