ವಿಶ್ವ ಪರಿಸರ ದಿನ: ಶಾಲೆಗಳಲ್ಲಿ ಪರಿಸರ ಜಾಗೃತಿ
World Environment Day: Environmental awareness in schools
ಬೆಳಗಾವಿ 12: ವಿಶ್ವ ಪರಿಸರ ದಿನದ ಅಂಗವಾಗಿ ಅಮೂಲ್ಯ ಬೂಂದ್ ಫೌಂಡೇಶನ್ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಿಂಡಲಗಾ ಹೈಸ್ಕೂಲ್ನಲ್ಲಿ ಪಾಹಿ ವೈಬ್ಸ್ ಫೌಂಡೇಶನ್ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.
ಶಾಲೆಯ ಅಗತ್ಯಕ್ಕೆ ಅನುಗುಣವಾಗಿ ಅಲಂಕಾರಿಕ, ಹೂ ಬಿಡುವ, ನೆರಳು ನೀಡುವ ಹಾಗೂ ಸ್ಥಳೀಯ ಜಾತಿಯ ಒಟ್ಟು 20 ಸಸಿಗಳನ್ನು ನೆಡಲಾಯಿತು. ವಿಶೇಷವೆಂದರೆ, ಪ್ರತಿಯೊಂದು ಸಸಿಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳ ಗುಂಪುಗಳಿಗೆ ನೀಡಲಾಗಿದ್ದು, ಅವುಗಳ ಆರೈಕೆ ಮತ್ತು ಸಂರಕ್ಷಣೆಯನ್ನು ವಿದ್ಯಾರ್ಥಿಗಳೇ ನಿರ್ವಹಿಸಲಿದ್ದಾರೆ. ಕೇವಲ ಸಸಿ ನೆಡುವುದಕ್ಕಿಂತ ಅದರ ಉಳಿವು ಮತ್ತು ಬೆಳವಣಿಗೆಯೂ ಮುಖ್ಯ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.
ಅಮೂಲ್ಯ ಬೂಂದ್ ಫೌಂಡೇಶನ್ ವತಿಯಿಂದ ಗೊಜಗೆ ಹೈಸ್ಕೂಲ್ನಲ್ಲಿ ಸುಸ್ಥಿರ ಋತುಚಕ್ರ ಆರೋಗ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಋತುಚಕ್ರದ ಬಗ್ಗೆ ಇರುವ ಮುಜುಗರ ಮತ್ತು ತಪ್ಪು ಕಲ್ಪನೆಗಳನ್ನು ನಿವಾರಿಸುವ ಉದ್ದೇಶದಿಂದ ವಿದ್ಯಾರ್ಥಿನಿಯರಿಗೆ ವೈಜ್ಞಾನಿಕ ಮಾಹಿತಿ ನೀಡಲಾಯಿತು. ಸ್ಯಾನಿಟರಿ ಪ್ಯಾಡ್ಗಳ ಅಸಮರ್ಕ ವಿಲೇವಾರಿಯಿಂದ ಉಂಟಾಗುವ ಪರಿಸರ ಮಾಲಿನ್ಯ ಹಾಗೂ ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಯಿತು.
ಹೆಲ್ತ್ಫ್ಯಾಬ್ ಸಂಸ್ಥೆಯ ಮರುಬಳಕೆ ಮಾಡಬಹುದಾದ "ಪಿರಿಯಡ್ ಪ್ಯಾಂಟಿ"ಗಳ ಕುರಿತು ಮಾಹಿತಿ ನೀಡಲಾಗಿದ್ದು, ಶಾಲೆಯ ವಿದ್ಯಾರ್ಥಿನಿಯರಿಗೆ ಅವುಗಳನ್ನು ವಿತರಿಸಲಾಯಿತು. ಮರುಬಳಕೆ ಮಾಡಬಹುದಾದ ಈ ಉತ್ಪನ್ನಗಳು ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ನೆರವಾಗುತ್ತವೆ ಎಂದು ತಿಳಿಸಲಾಯಿತು.
ಪರಿಸರ ಸಂರಕ್ಷಣೆ ಎಂದರೆ ಕೇವಲ ಸಸಿ ನೆಡುವುದಲ್ಲ, ಜವಾಬ್ದಾರಿಯುತ ಜೀವನಶೈಲಿ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ತಿಳಿಸಲಾಯಿತು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 