ವಿಶ್ವದ ಆರ್ಥಿಕ ಸ್ಥಿತಿ ಚೇತರಿಕೆ : ರಘುರಾಮ್ ರಾಜನ್
ನವದೆಹಲಿ, ನ 7: ಅಮೆರಿಕ - ಚೀನಾ ನಡುವಿನ ವ್ಯಾಪಾರ ಸಹಕಾರ ಒಪ್ಪಂದದ ನಿರೀಕ್ಷೆಗಳು ಮತ್ತು ಫೆಡರಲ್ ಬ್ಯಾಂಕ್ ನ ಬಡ್ಡಿ ಕಡಿತ ನೀತಿಗಳಿಂದಾಗಿ ವಿಶ್ವದ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಸಿಂಗಪುರದಲ್ಲಿ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಮತ ವ್ಯಕ್ತಪಡಿಸಿದ್ದಾರೆ. ಈ ವರ್ಷ ಫೆಡರಲ್ ಬ್ಯಾಂಕ್ ಮೂರು ಬಾರಿ ಬಡ್ಡಿ ದರಗಳನ್ನು ಕಡಿತ ಮಾಡಿರುವುದು ಮತ್ತು ವ್ಯಾಪಾರ ಮಾತುಕತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಾಗತಿಕ ಆರ್ಥಿಕ ಪರಿಸ್ಥಿತಿ ನಿಧಾನವಾಗಿ ಉತ್ತಮ ಸ್ಥಿತಿಗೆ ಮರಳುತ್ತಿದೆ ಎಂದು ಅವರು ಹೇಳಿದ್ದಾರೆ. ವ್ಯಾಪಾರ ಒಪ್ಪಂದದಲ್ಲಿ ಸ್ವಲ್ಪ ಮಟ್ಟಿನ ಪ್ರಗತಿ ಕಂಡು ಬಂದಿರುವುದು ಆರ್ಥಿಕ ಬೆಳವಣಿಗೆಗೆ ಆಶಾದಾಯಕವಾಗಿದೆ. ಆದರೆ ಇದು ಶಾಶ್ವತ ಪರಿಹಾರವಲ್ಲ. ಇನ್ನು ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಕಳೆದ ವರ್ಷ ಇದ್ದ ಸ್ಥಳಕ್ಕಿಂತ ನಾವು ಇಂದು ಉತ್ತಮ ಸ್ಥಳದಲ್ಲಿದ್ದೇವೆ ಎಂದು ಅವರು ಒಗಟಾಗಿ ಹೇಳಿದ್ದಾರೆ. ಬ್ಯಾಂಕಿಂಗ್ ಕೆಲಸಗಳು ಇನ್ನಷ್ಟು ಕ್ಲಿಷ್ಟಕರವಾಗುತ್ತಿದ್ದು ಹೆಚ್ಚು ರಾಜಕೀಯಗೊಳ್ಳುತ್ತಿದೆ. ಬ್ಯಾಂಕ್ ಮುಖ್ಯಸ್ಥರ ಹುದ್ದೆಗೆ ಸ್ಥಳೀಯ ರಾಜಕೀಯ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವವರು ಬೇಕಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಯೂರೋಪಿನ ಸೆಂಟ್ರಲ್ ಬ್ಯಾಂಕ್, ವ್ಯಾಪಾರ ಉದ್ಯಮಕ್ಕೆ ಅನುಕೂಲವಾಗುವಂತೆ ತನ್ನ ಆರ್ಥಿಕ ನೀತಿಯನ್ನು ಮತ್ತಷ್ಟು ಉದಾರಗೊಳಿಸುವ ಸಾಧ್ಯತೆ ಕಡಿಮೆಯಾಗಿದೆ ಎಂದು ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 