ಯಲ್ಲಮ್ಮನ ಗುಡ್ಡ ಪ್ಲಾಸ್ಟಿಕ್ ಮುಕ್ತ ಅಭಿಯಾನ: ವ್ಯಾಪಾರಿಗಳಿಗೆ ಪರಿಸರ ಜಾಗೃತಿ
Yallammana Gudda Plastic-Free Campaign: Environmental Awareness for Traders
ಲೋಕದರ್ಶನ ವರದಿ
ಉಗರಗೋಳ 12: ಯಲ್ಲಮ್ಮನ ಗುಡ್ಡದಲ್ಲಿನ ಪ್ರತಿಯೋಬ್ಬ ವ್ಯಾಪಾರಿಗಳು ಪ್ಲಾಸ್ಟಿಕ್ ಮುಕ್ತವಾಗಿ ವ್ಯವಹಾರ ಮಾಡುವುದಾಗಿ ಸಂಕಲ್ಪ ತೋಡಬೇಕು ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯಧರ್ಶಿ ಪ್ರಭಾವತಿ ಫಕೀರಪೂರ ಹೇಳಿದರು. ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಶನಿವಾರ ರಂದು ಹಮ್ಮಿಕೊಂಡ ಪ್ಲಾಸ್ಟಿಕ್ ಮುಕ್ತ ಯಲ್ಲಮ್ಮ ದೇವಸ್ಥಾನ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣವಾದರೆ ಮಾತ್ರ ಪರಿಸರ ಉಳಿಯಲು ಸಾಧ್ಯ. ಈ ಅಭಿಯಾನಕ್ಕೆ ದೇವಸ್ಥಾನದ ಎಲ್ಲ ವ್ಯಾಪಾರಿಗಳು ಕೈಜೋಡಿಸಬೇಕು ಎಂದು ಕರೆಕೊಟ್ಟರು. ಸ್ಥಳಿಯರು, ವ್ಯಾಪಾರಸ್ಥರು, ಭಕ್ತರು ಸಹ ಶುಚಿತ್ವಕ್ಕೆ ಆಧ್ಯತೆ ನೀಡಬೇಕು. ಪ್ಲಾಸ್ಟಿಕ್ ಮುಕ್ತ ಯಲ್ಲಮ್ಮನ ಗುಡ್ಡ ನಿರ್ಮಾಣಕ್ಕೆ ಈ ಅಭಿಯಾನ ನಡೆಸುತ್ತಿದ್ದೆವೆ, ಶ್ರೀಕ್ಷೇತ್ರದಲ್ಲಿನ ಪ್ರತಿಯೊಂದು ಅಂಗಡಿಗಳಿಗೆ ತೇರಳಿ ಜಾಗೃತಿ ಮೂಡಿಸುತ್ತಿದ್ದೆವೆ ಇದಕ್ಕೆ ಪ್ರತಿಯೊಬ್ಬರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದ ಪ್ರಭಾವತಿ ಫಕೀರಪೂರ ಅವರು ಮುಂದೆ ಬರುವ ದಿನಗಳಲ್ಲಿ ಸಂಪೂರ್ಣವಾಗಿ ಯಲ್ಲಮ್ಮನ ದೇವಸ್ಥಾನವನ್ನು ಪ್ಲಾಸ್ಟಿಕ್ ಮುಕ್ತ ದೇವಸ್ಥಾನವನ್ನಾಗಿ ಮಾಡಲಾಗುವುದು ಎಂದರು. ಅಲ್ಲಮಪ್ರಭು ಪ್ರಭುನವರ, ಶೀತಲ ಕಡಟ್ಟಿ, ಬೆಳಗಾವಿಯ ಶಿವು ನಂದಗಾಂವಿ ದೇವಸ್ಥಾನದ ಸಿಬ್ಬಂದಿ ಇದ್ದರು.
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 