ಯಡಿಯೂರಪ್ಪ ಅವರದ್ದು ಏಕಚಕ್ರಾಧಿಪತ್ಯ: ದಿನೇಶ್ ಗುಂಡೂರಾವ್
ಬೆಂಗಳೂರು, ಆ 3 ಸಂಪುಟ ರಚನೆ ವಿಳಂಬ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾಲೆಳೆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದ್ದಾರೆ
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿ 8 ದಿನಗಳು ಕಳೆದಿವೆ. ಸರ್ಕಾರ ರಚನೆಯಾಗಿ ಒಂದು ವಾರವಾದರೂ ಸಹ ಇದೂವರೆಗೂ ಮಂತ್ರಿ ಮಂಡಲ ರಚನೆಯಾಗಿಲ್ಲ. ಅದು ರಚನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿರುವ ಯಡಿಯೂರಪ್ಪ ಅವರದ್ದು ಏಕಚಕ್ರಾಧಿಪತ್ಯ ರಾಜ್ಯಭಾರ. ರಾಜ್ಯದಲ್ಲಿ ಆಡಳಿತ ಇನ್ನೂ ಪ್ರಾರಂಭವೇ ಆಗಿಲ್ಲ. ಈ ರಾಜ್ಯಭಾರವನ್ನು ಅವರಿನ್ನೂ ಬಹಳ ದಿನಗಳ ಕಾಲ ಮುಂದುವರೆಸುವ ಮನಸಿನಲ್ಲಿದ್ದಾರೆ. ಎಂದು ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 