ಬೆಕ್ಕಿನ ಮರಿಗೆ ಆಹಾರ ನೀಡಿದ ಯಡಿಯೂರಪ್ಪ: ಪ್ರಾಣಿ, ಪಕ್ಷಿಗಳಿಗೆ ಉಣಿಸಲು ಮುಖ್ಯಮಂತ್ರಿ ಮನವಿ
ಬೆಂಗಳೂರು, ಏ.10, ನಾಡಿನಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಸಂಕಲ್ಪತೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಪ್ರಾಣಿ, ಪಕ್ಷಿಗಳ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ.ಇಂದು ಬೆಳಗ್ಗೆ ಮುಖ್ಯಮಂತ್ರಿ ಟ್ವೀಟ್ ಮಾಡಿ, ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ. ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ. ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ವಿನಂತಿಸಿಕೊಂಡಿದ್ದಾರೆ.ಮಾತ್ರವಲ್ಲ ಸ್ವತಃ ಯಡಿಯೂರಪ್ಪ ಅವರೇ ಬೆಕ್ಕಿನ ಮರಿಯೊಂದಕ್ಕೆ ಆಹಾರ ಉಣಿಸುವ ಮೂಲಕ ಹೇಳಿದ್ದನ್ನು ಮಾಡಿ ತೋರಿಸಿದ್ದಾರೆ. ಬೆಕ್ಕಿನ ಮರಿಗೆ ಆಹಾರ ನೀಡುವ ಚಿತ್ರವನ್ನು ಅವರು ಟ್ವೀಟ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 