ಸುಪ್ರೀಂ ತೀಪು ಸ್ವಾಗತಿಸಿದ ಯಡಿಯೂರಪ್ಪ: ಶಾಂತಿಗೆ ಕರೆ ನೀಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು, ನ 9 : ಅಯೋಧ್ಯಾ ಭೂಮಿ ವಿವಾದ ಸಂಬಂಧ ಸರ್ವೋಚ್ಛ ನ್ಯಾಯಾಲಯ ಪ್ರಕಟಿಸಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತೀಪು ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ನೀಡಿರುವ ತೀಪು ಯಾರೊಬ್ಬರ ಸೋಲು ಅಲ್ಲ, ಇದು ಗೆಲುವೂ ಅಲ್ಲ. ಸೋಲು-ಗೆಲುವು ಎಂದು ಯಾರೂ ಭಾವಿಸಬಾರದು. ಯಾರೂ ಉದ್ವೇಗಕ್ಕೆ ಒಳಗಾಗಬಾರದು, ವಿಜೃಂಭಿಸಬಾರದು. ನಾಡಿನಲ್ಲಿ ಶಾಂತಿ, ಸಾಮರಸ್ಯ ಸೌಹಾರ್ದತೆ ಕಾಪಾಡಬೇಕು ಎಂದು ಕರೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಎಲ್ಲರು ಶಾಂತಿ, ಸೌಹಾರ್ದತೆ ಕಾಪಾಡಬೇಕು. ಅಯೋಧ್ಯೆ ತೀಪು ವಿಚಾರ ಬಗ್ಗೆ ತಾವು ಮಾತನಾಡುವುದಿಲ್ಲ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 