ಸುಪ್ರೀಂ ತೀಪು ಸ್ವಾಗತಿಸಿದ ಯಡಿಯೂರಪ್ಪ: ಶಾಂತಿಗೆ ಕರೆ ನೀಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು, ನ 9 : ಅಯೋಧ್ಯಾ ಭೂಮಿ ವಿವಾದ ಸಂಬಂಧ ಸರ್ವೋಚ್ಛ ನ್ಯಾಯಾಲಯ ಪ್ರಕಟಿಸಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತೀಪು ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ನೀಡಿರುವ ತೀಪು ಯಾರೊಬ್ಬರ ಸೋಲು ಅಲ್ಲ, ಇದು ಗೆಲುವೂ ಅಲ್ಲ. ಸೋಲು-ಗೆಲುವು ಎಂದು ಯಾರೂ ಭಾವಿಸಬಾರದು. ಯಾರೂ ಉದ್ವೇಗಕ್ಕೆ ಒಳಗಾಗಬಾರದು, ವಿಜೃಂಭಿಸಬಾರದು. ನಾಡಿನಲ್ಲಿ ಶಾಂತಿ, ಸಾಮರಸ್ಯ ಸೌಹಾರ್ದತೆ ಕಾಪಾಡಬೇಕು ಎಂದು ಕರೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಎಲ್ಲರು ಶಾಂತಿ, ಸೌಹಾರ್ದತೆ ಕಾಪಾಡಬೇಕು. ಅಯೋಧ್ಯೆ ತೀಪು ವಿಚಾರ ಬಗ್ಗೆ ತಾವು ಮಾತನಾಡುವುದಿಲ್ಲ ಎಂದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 