ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ಯೋಗ ದಿನಾಚರಣೆ
Yoga Day celebration at Swami Vivekananda School
ಇಂಡಿ 22: ತಾಲೂಕಿನ ಹೋರ್ತಿ ಸ್ವಾಮಿ ವಿವೇಕಾನಂದರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾತನಾಡಿದ ಶಾಲೆಯ ಉಪಾಧ್ಯಕ್ಷ ಎಲ್ ಎಸ್ ಕಲಶೆಟ್ಟಿ ಇಂದಿನ ಒತ್ತಡದ ಜೀವನ ಪದ್ಧತಿಯಿಂದ ಹಾಗೂ ಆಹಾರ ಪದ್ಧತಿಯಿಂದಾಗಿ ದೇಹ ಸದೃಢವಾಗಿರಲು ಸಾಧ್ಯವಾಗುತ್ತಿಲ್ಲ. ಪೂರ್ಣ ಆಯಸ್ಸು ಪಡೆಯಬೇಕಾದರೆ ಯೋಗಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಮುಖ್ಯಗುರುಮಾತೆ ಜೆ ಎಮ್ ಬಿರಾದಾರ ಮಾತನಾಡಿ ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಜೀವನದಲ್ಲಿ ಯೋಗವನ್ನು ಅಳಪಡಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಶಿಕ್ಷಕ ಡಿ ಎಮ್ ಹಿರೇಮಠ ಮಾತನಾಡಿ ಸದೃಢ ಆರೋಗ್ಯ ಹೊಂದಲು ಯೋಗ ಸಹಕಾರಿಯಾಗಿದ್ದು, ರೋಗಗಳಿಂದಲೂ ದೂರವಿರಬಹುದು. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಯೋಗವು ಮನುಷ್ಯನ ಮನಸ್ಸು ಏಕಾಗ್ರಗೊಳಿಸುವ ಶಿಕ್ಷಣ ಕ್ರಮವಾಗಿದೆ. ಯೋಗವು ಸೀಮಿತ ಧರ್ಮ, ಜಾತಿ, ಪಂಗಡ ರಾಷ್ಟ್ರೀಯತೆಗಳ ಭೇದ ಮೀರಿ ನಿಂತಿದೆ. ಇದು ಒಂದು ರಾಷ್ಟ್ರೀಯ ಭಾವೈಕ್ಯತೆ ಸಮನ್ವಯ ಜೀವನದ ಶಿಕ್ಷಣವಾಗಿದೆ ಎಂದರು.
ಶಿಕ್ಷಕರಾದ ಜೆ ಎಸ್ ಕಂದಗಲ್, ಎಸ್ ಬಿ ಮಸೂತಿ, ಎಸ್ ಎಮ್ ಖೈನೂರ, ಎ ಟಿ ದೇವಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 