ಯೋಗದಿಂದ ಆರೋಗ್ಯ ವೃದ್ಧಿ: ಶಶಿಕಾಂತ ಚುನಮರಿ
Yoga improves health: Shashikant Chunamari
ಯೋಗದ ಸತ್ಸಂಗ ಸಂಸ್ಥೆಯ ಶಾಖೆಗಳಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಬೆಳಗಾವಿ 19: ಬೈಲಹೊಂಗಲದ ವ್ಯಾಪ್ತಿಯ ಸಂಗ್ರೇಶಕೊಪ್ಪದ ಸರಕಾರಿ ಕನ್ನಡ ಮಾಧ್ಯಮ ಹಿರಿಯ ಶಾಲೆಯಲ್ಲಿ 8, 9 ಮತ್ತು 10ನೇ ತರಗತಿಯ ಮಕ್ಕಳಿಗಾಗಿ ಯೋಗದ ಸತ್ಸಂಗ ಸಂಸ್ಥೆಯ ಶಾಖೆಗಳಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಒಂದು ವಿಶೇಷ ಯೋಗ ದಿನಾಚರಣೆಯ ಕರ್ಯಕ್ರಮ ಚಾಲನೆ ನೀಡಿದರು.
ಈ ವೇಳೆ ಬೆಳಗಾವಿಯ ಯೋಗಾ ಹಿರಿಯ ಸಾಧಕರಾದ ಶಶಿಕಾಂತ ಚುನಮರಿ ಅವರು ಮಾತನಾಡಿ, ಆರೋಗ್ಯವಾಗಿ ಇರಬೇಕಾದರೆ ನಿತ್ಯ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುವ ಒಂದು ಅತ್ಯುತ್ತಮ ಅಭ್ಯಾಸವಾಗಿದೆ. ನಿಯಮಿತ ಯೋಗಾಭ್ಯಾಸದಿಂದ, ಹೃದಯರಕ್ತನಾಳದ ಆರೋಗ್ಯ ಸುಧಾರಿಸುತ್ತದೆ, ನೋವು ಕಡಿಮೆಯಾಗುತ್ತದೆ, ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಮತ್ತು ಉಸಿರಾಟದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಶಾಲಾ ವಿದ್ಯರಿ್ಥಗಳಿಗೆ ಯೋಗ-ಧ್ಯಾನದ ಪರಿಚಯ ಮತ್ತು ಅದರ ಮಹತ್ವವನ್ನು ತಿಳಿಸಿದರು.
ಮಕ್ಕಳಿಗಾಗಿ ಯೋಗದಾ ಸತ್ಸಂಗ ಧ್ಯಾನ ಮಂಡಳಿಯಿಂದ ಯೋಗಾ ಕರ್ಯ ಆಯೋಜಿಸಲಾಗಿದೆ. ಮಕ್ಕಳು ಆಟ- ಪಾಠದೊಂದಿಗೆ ಯೋಗವನ್ನು ಮಾಡಬೇಕು.
ನಮ್ಮ ಅಂಗೈಯಲ್ಲೇ ಆರೋಗ್ಯವಿದ್ದು, ಯೋಗದಿಂದ ಆರೋಗ್ಯವು ವೃದ್ಧಿಯಾಗುತ್ತದೆ. ನಮ್ಮ ನಿತ್ಯ ಕರ್ಯವು ಯೋಗಾಸನ ಮತ್ತು ಪ್ರಾಣಾಯಾಮದ ಆಚರಣೆಯಿಂದಲೇ ಆರಂಭಗೊಳ್ಳಬೇಕು ಎಂದು ಹೇಳಿದರು.
ಶಾಲೆಯ ಒಟ್ಟು 330 ಶಾಲಾ ವಿದ್ಯಾರ್ಥಿಗಳು, 15 ಬೋಧಕ ಸಿಬ್ಬಂದಿ ಹಾಗೂ ಪ್ರಾಂಶುಪಾಲರು ಈ ಕರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ತಮ್ಮ ಮೆಚ್ಚುಗೆಯನ್ನು ಸೂಚಿಸಿದರು.
ಈ ವೇಳೆ ಮಂಜುಳಾ ಚುನಮರಿ, ಯೋಗದಾ ಸತ್ಸಂಗ ಧ್ಯಾನ ಕೇಂದ್ರ, ಬೈಲಹೊಂಗಲದ ಸಾಧಕರಾದ ಎಮ್ ಎಸ್ ಕುಂಬಾರ, ಪಟ್ಟಿಹಾಳ ಹಾಗೂ ಸುನೀಲ್ ಮೆಟಗುಡ್ ಹಾಗೂ ಇತರರು ಇದ್ದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 