ಬೇರಲಸಿನ ಕಾಯಿ ಫ್ರೈ ಗಂಟಲಿಗೆ ಸಿಲುಕಿ ಯುವಕ ಸಾವು
Young man dies after food gets stuck in his throat
ಕಾರವಾರ 01: ಊಟ ಮಾಡುವಾಗ ಅನ್ನ ಹಾಗೂ ಬೇರಲಸಿನ ಕಾಯಿ ತುಂಡುಗಂಟಲಿಗೆ ಸಿಲುಕಿದ ಪರಿಣಾಮ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಮೃತ ಯುವಕನನ್ನು ಬಿಣಗಾ ಮಾಳಸವಾಡದ ಅಮಿತ್ ಮಾಳಸೇಕರ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ, ಹುಬ್ಬಳ್ಳಿಯಲ್ಲಿ ಒಂದು ವಾರಚಿಕಿತ್ಸೆ ಪಡೆದು ಮನೆಗೆ ಬಂದಿದ್ದ.ಮನೆಯಲ್ಲಿ ಊಟ ಮಾಡುವಾಗ ಅನ್ನ, ಬೇರಲಸಿನ ಕಾಯಿ ತುಂಡು ಗಂಟಲಲ್ಲಿ ಸಿಲುಕಿದ ಪರಿಣಾಮ ತೊಂದರೆ ಅನುಭವಿಸಿದ ಅಮಿತ್, ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ, ಬದುಕಿಸುವ ಯತ್ನ ಫಲ ಕಂಡಿಲ್ಲ. ತಕ್ಷಣವೇ ಕುಸಿದುಬಿದ್ದ ಆತನನ್ನು ಕೂಡಲೇ ಸರ್ಕಾರಿ ಆ್ಯಂಬುಲೆನ್ಸ್ ಮೂಲಕ ಕಾರವಾರ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ವೈದ್ಯರು ಪರೀಕ್ಷಿಸಿ, ಆಸ್ಪತ್ರೆಗೆ ತರುವ ಮುನ್ನ ಪ್ರಾಣ ಹೋಗಿರುವುದನ್ನು ದೃಢಪಡಿಸಿದರು.
ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ಅಮಿತ್ ಸಹೋದರ ಘಟನೆವಿವರಿಸಿ ದೂರು ನೀಡಿದ್ದಾನೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 