ಯುವಕ , ಯುವತಿಯರು ನಿಯಮಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಕೆ ಎನ್ ಶಿವಕುಮಾರ

ಯುವಕ , ಯುವತಿಯರು ನಿಯಮಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಕೆ ಎನ್ ಶಿವಕುಮಾರ Young men and women should be motivated to donate blood regularly: KN Shivakumar

ಲೋಕದರ್ಶನ ವರದಿ 

ಬೆಳಗಾವಿ 16: ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆ, ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಕರ್ನಾಟಕ ರಾಜ್ಯ ರಕ್ತ ಚಾಲನ ಪರಿಷತ್ತು ಬೆಂಗಳೂರು, ಜಿಲ್ಲಾಏಡ್ಸ್‌ ನಿರೋಧಕ ಮತ್ತು ನಿಯಂತ್ರಣ ಘಟಕ, ಎಸ್‌.ಬಿ.ಜಿ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿ ರಕ್ತ ಕೇಂದ್ರ ಬೆಳಗಾವಿ ಇವರ  ಸಂಯುಕ್ತಾಶ್ರಾಯದಲ್ಲಿ ಮಂಗಳವಾರ (ಜೂ.16) ಎಸ್‌.ಬಿ.ಜಿ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನಾಚರಣೆ” ಕಾರ್ಯಕ್ರಮ ಜರುಗಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಕೆ ಎನ್ ಶಿವಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ತದ ನಂತರ ಮಾತನಾಡಿದ ಅವರು ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ, ಆದ್ದರಿಂದ ಆರೋಗ್ಯವಂತ ಯುವಕ, ಯುವತಿಯರು ನಿಯಮಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಕರೇ ನೀಡಿದರು.