ತಂಬಾಕು ಮುಕ್ತ ಸಮಾಜ ನಿರ್ಮಾನಕ್ಕೆ ಯುವಜನತೆ ಕೈಜೋಡಿಸಬೇಕು: ಡಾ.ಪ್ರಮೋದ ಸಿಂದಗಿ
Youth should join hands in building a tobacco-free society: Dr. Pramoda Sindagi
ಯರಗಟ್ಟಿ, 02 : ತಂಬಾಕು ಮುಕ್ತ ಸಮಾಜ ನಿರ್ಮಾನಕ್ಕೆ ಯುವಜನತೆ ಕೈಜೋಡಿಸಬೇಕು. ತಂಬಾಕು ಸೇವನೆಯಿಂದ ಸಾಮಾಜಿಕ ಮತ್ತು ದೈಹಿಕ ಸ್ವಾಸ್ಥ್ಯ ಹಾಳಾಗುತ್ತಿದ್ದು, ತಡೆಗಟ್ಟಲು ಯುವ ಜನತೆ ಮುಂದಾಗಬೇಕು ಎಂದು ವೈದ್ಯಾಧಿಕಾರಿ ಡಾ.ಪ್ರಮೋದ ಸಿಂದಗಿ ಹೇಳಿದರು.
ಸಮೀಪದ ತಲ್ಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರುಷರಲ್ಲಿ ತಂಬಾಕು ಸೇವನೆಯಿಂದ ಸಂತಾನ ಹೀನತೆಗೆ ಕಾರಣವಾಗಬಹುದು ಎಂದರು.
ಶುಶ್ರೂಷಾಧಿಕಾರಿ ವಿರೇಶ ದೇಮಶೇಟ್ಟಿ ಮಾತನಾಡಿ, ದುಶ್ಚಟಗಳು ಮಕ್ಕಳ ಬದುಕನ್ನು ನಾಶಮಾಡುತ್ತವೆ. ತಂಬಾಕು ವಿರೋಧಿ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಇತರರಿಗೆ ವ್ಯಸನಗಳಿಂದ ದೂರವಿರಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಪ್ರಥಮ ದರ್ಜೆ ಸಹಾಯಕ ಯಲ್ಲಪ್ಪ ಹಲಗಲಿ, ಪಾರ್ಮಸಿ ಅಧಿಕಾರಿ ಆರತಿ ಹೊಳ್ಳಿಕೇರಿ, ಎಲ್ಟಿಒ ಶಶಿಧರ ಉಪ್ಪಿನ, ವಸಂತ ಚವ್ಹಾನ, ಗೀತಾ ಪೋಳ, ಜಿ.ಪಿ.ಹೊಂಗಲ, ಶಂಕರ ಲಮಾಣಿ, ಮಹಾವೀರ ಜೊಡಟ್ಟಿ, ರಾಜೇಶ್ವರಿ ನಾಯ್ಕರ, ಬಸವ್ವ ಕುಂಬಾರ, ನೀಲವ್ವ ಬೆನಕಟ್ಟಿ, ಶೋಭಾ ಚುಳಕಿ, ಶಾಂತವ್ವ ಜಡೆಯರ, ಮಹಾದೇವಿ ಬಾರ್ಕಿ, ಬೀಮವ್ವ ಬಜಂತ್ರಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 