ಬಳ್ಳಾರಿ: ಸಿಡಿಪಿಓ ಜಲಾಲಪ್ಪರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 11: ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಸೇರಿದ್ದು ಇವರನ್ನುದ್ದೇಶಿಸಿ ಮಾತನಾಡಿದ ಅಂಗವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮಚಂದ್ರಪ್ಪ ಮಾತನಾಡಿ ಸಿಡಿಪಿಓ ಜಲಾಲಪ್ಪನವರ ಮೇಲೆ ಕ್ರಮ ತೆಗೆದುಕೊಳ್ಳಲು ಮತ್ತು ವಿಚಾರಣೆಗೆ ಆದೇಶಿಸುವ ಕುರಿತು ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚಚರ್ೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳವುದಾಗಿ ಭರವಸೆ ನೀಡಿದರು. ತಿಂಗಳಿಗೊಮ್ಮೆ ಜಿಲ್ಲಾ ಪಂಚಾಯತ್ ಡಿ.ಎಸ್.-2 ಇವರ ಮುಂದಾಳತ್ವದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಸಮಗ್ರ ಜಾರಿ ಕುರಿತಾದ ಕುಂದುಕೊರತೆಗಳ ಸಭೆ ನಡೆಸಬೇಕೆಂದು ನಿದರ್ೆಶನ ಇದ್ದಾಗಲೂ ಈ ಕುರಿತು ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಅಂಗನವಾಡಿ ಫೆಡರೇಷನ್ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಮಾತನಾಡಿ ವಿಕೃತ ಮನಸ್ಸಿನ ವ್ಯಕ್ತಿಯಾದ ಜಲಾಲಪ್ಪನವರು ಮಹಿಳೆಯರೇ ತುಂಬಿರುವ ಇಲಾಖೆಯಲ್ಲಿ ಉದ್ಯೋಗ ಮಾಡಲು ಅರ್ಹರಲ್ಲ. ಇಂತಹ ಅಧಿಕಾರಿಯನ್ನು ತೆಗೆದು ಹಾಕುವ ತನಕ ನಮ್ಮ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.
ಸಿ.ಇ.ಓ ರಜೆ ಇರುವ ಕಾರಣ ಡಿ.ಎಸ್-2 ಉಮೇಶನಾಯ್ಕ ಇವರು ಮನವಿ ಸ್ವೀಕರಿಸುತ್ತಾ ನಿಮ್ಮ ದೂರಿನ ಕುರಿತು ಸಿ.ಇ.ಓ.ರವರು ಬಂದ ನಂತರ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದೇರೀತಿ ಕುಂದುಕೊರತೆಗಳ ಸಭೆ ನಡೆಸುವ ಜವಾಬ್ದಾರಿ ನನ್ನದೇ ಇರುವ ಕಾರಣ ಈ ಕುರಿತು ಕೂಡಲೇ ದಿನಾಂಕ ನಿಗದಿಪಡಿಸಿ ಮಾಹಿತಿ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 