ಶೀಘ್ರ ತುಂಗಭದ್ರಾ ನದಿಯಿಂದ ನಗರಕ್ಕೆ ನೀರು: ಜಿಲ್ಲಾಧಿಕಾರಿ
ಹಾವೇರಿ27: ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು ಹರಿಬಿಡಲಾಗಿದ್ದು, ಈಗಾಗಲೇ ರಾಣೇಬೆನ್ನೂರ ಗುತ್ತಲ ಭಾಗದ ಸಮೀಪ ನೀರು ಬಂದಿದೆ. ಶೀಘ್ರವೇ ಹಾವೇರಿ ನಗರ ಹಾಗೂ ರಾಣೇಬೆನ್ನೂರ ನಗರಕ್ಕೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಧ್ಯಮಗೋಷ್ಠಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಹಿತಿ ನೀಡಿದ ಅವರು, ರಾಣೇಬೆನ್ನೂರ ಹಾಗೂ ಗುತ್ತಲ ಪಂಪ್ಹೌಸ್ನಿಂದ ನೀರು ಪಂಪಿಂಗ್ ಆರಂಭಿಸಲಾಗಿದೆ. ಬುಧವಾರ ಅಥವಾ ಗುರುವಾರ ಹಾವೇರಿ ನಗರಕ್ಕೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ನಗರದ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಟಾಸ್ಕಪೋಸರ್್ ಹಾಗೂ ನಗರಸಭೆ ವತಿಯಿಂದ ಕೊರೆಸಲಾದ ಕೊಳವೆಬಾವಿಗಳಿಂದ ಓವರ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಕುರಿತಂತೆ ಯೋಜನೆಯೊಂದನ್ನು ರೂಪಿಸಲಾಗುವುದು. ನಗರದಲ್ಲಿ 280ಕ್ಕೂ ಹೆಚ್ಚು ಕೊಳವೆಬಾವಿಗಳಿವೆ ಎಂದು ವಿವರಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ 165 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಈ ಪೈಕಿ ಈಗಾಗಲೇ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗ್ರಾಮಗಳಿಗೆ 86 ಖಾಸಗಿ ಬೋರವೆಲ್ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಈವರೆಗೆ ಟ್ಯಾಂಕರ್ ಮೂಲಕ ಯಾವ ಗ್ರಾಮಗಳಿಗೂ ನೀರು ಪೂರೈಸಿರುವುದಿಲ್ಲ. ಆದರೆ ಬ್ಯಾಡಗಿ ತಾಲೂಕು ಶಿಡೇನೂರ ಗ್ರಾಮಕ್ಕೆ ಖಾಸಗಿ ಕೊಳವೆಬಾವಿಯ ತಾಂತ್ರಿಕ ಸಮಸ್ಯೆಯಿಂದ ತಾತ್ಕಾಲಿಕವಾಗಿ ಒಂದು ವಾರ ಟ್ಯಾಂಕರ್ ಬಳಸಲಾಗಿದೆ. ಈಗ ಟ್ಯಾಂಕರ್ ಸರಬರಾಜು ನಿಲ್ಲಿಸಲಾಗಿದೆ ಎಂದು ವಿವರಿಸಿದರು.
ಎಪ್ರಿಲ್ ಮೇ ಮಾಹೆಯಲ್ಲಿ ಉಳಿದ 125 ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ನಿರೀಕ್ಷಿಸಲಾಗಿದೆ. ಈಗಾಗಲೇ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ವಿಭಾಗದಿಂದ ಹಾಗೂ ಟಾಸ್ಕಪೋಸರ್್ ವತಿಯಿಂದ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಸಕಾಲಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲಾಗುತ್ತಿದೆ. ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಅವರು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 