ಬ್ರಾಹ್ಮಣ ಯುವತಿ ಜೊತೆ ರಾಹುಲ್ ವಿವಾಹ ಮಾಡಿಸುವಂತೆ ಸೋನಿಯಾಗೆ ಹೇಳಿದ್ದೆ - ದಿವಾಕರ್ ರೆಡ್ಡಿ
ಲೋಕದರ್ಶನ ವರದಿ
ನವದೆಹಲಿ, ಜು.06 (ಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚಚರ್ೆಯಾಗಿರುವ ವಿಷಯ. ಇದೇ ವಿಷಯದ ಬಗ್ಗೆ ರಾಹುಲ್ ಗಾಂಧಿ ಕುಟುಂಬದ ಹಿತೈಸಿ, ಮಾಜಿ ಕಾಂಗ್ರೆಸ್ಸಿಗ, ಹಾಲಿ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಈಗ ಮತ್ತೊಮ್ಮೆ ಮಾತನಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕಾದರೆ ಬ್ರಾಹ್ಮಣ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಓರ್ವ ಉತ್ತಮ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸೋನಿಯಾ ಗಾಂಧಿಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ನನ್ನ ಸಲಹೆಯನ್ನು ಕೇಳಲಿಲ್ಲ ಎಂದು ಜೆಸಿ ದಿವಾಕರ ರೆಡ್ಡಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಬೆಂಬಲ ಅಗತ್ಯವಿದೆ, ಈಹಿನ್ನೆಲೆಯಲ್ಲಿ ರಾಹುಲ್ ಗೆ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸಲಹೆ ನೀಡಿದ್ದಾಗಿ ರೆಡ್ದಿ ಹೇಳಿದ್ದಾರೆ. ರಾಹುಲ್ ಗಾಂಧಿ ಹಾಗೂ ರಾಯ್ ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ವಿವಾಹದ ಕುರಿತು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು, ಆದರೆ ಸ್ವತಃ ಅದಿತಿ ಈ ಬಗ್ಗೆ ಸ್ಪಷ್ಟನೆ ನೀಡಿ ರಾಹುಲ್ ತನ್ನ ಸಹೋದರನಿದ್ದಂತೆ ಎಂದು ವದಂತಿಗಳಿಗೆ ತೆರೆ ಎಳೆದಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 