ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಚಾಲಕನ ಪರವಾನಗಿ ರದ್ದು
ಮುಂಬೈ,ನ.20-- ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಮೂರು ತಿಂಗಳ ಕಾಲ ಪರವಾನಗಿ ರದ್ದು ಮಾಡಲು ಮಹಾರಾಷ್ಟ್ರ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.
ಸರಕಾರ ಕಳೆದ ಮೂರು ವರ್ಷದ ಹಿಂದೆ ಹೊರಡಿಸಿರುವ ನಿರ್ಣಯವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ತಮ್ಮ ಎಲ್ಲ ಶಾಖೆಗಳಿಗೆ, ಇಲಾಖೆ ಸುತ್ತೋಲೆ ಕಳುಹಿಸಿದೆ.
ಸಂಚಾರ ಅಪರಾಧಿಗಳ ಚಾಲನ ಪರವಾನಗಿ ರದ್ದು ಮಾಡಲು ಪೊಲೀಸ್ ಇಲಾಖೆ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ಟಿಒ) ಅನುಮತಿ ಪಡೆದು, ಸರಕಾರಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿರುವ ಆರು ವಿಧದ ನಿಯಮ ಉಲ್ಲಂಘನೆಗಳಿಗಾಗಿ ಕನಿಷ್ಟ ಮೂರು ತಿಂಗಳ ಕಾಲ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಅಧಿಕಾರವಿದೆ.
ಪುಣೆ-ಮುಂಬೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ Ùಳಶೂನ್ಯ ಸಹನೆÙಳ ಕಾಯರ್ಾಚರಣೆಯನ್ನು ಆರಂಭಿಸಲಾಗಿದ್ದು ಮತ್ತು ಶೀಘ್ರದಲ್ಲೇ ಇದು ಇತರ ಹೆದ್ದಾರಿಗಳಲ್ಲಿಯೂ ಸಹ ಪ್ರಾರಂಭವಾಗಲಿದೆ.
ವೇಗದ ಚಾಲನೆ, ಕುಡಿದು ಚಾಲನೆ, ಸಿಗ್ನಲ್ ಜಂಪ್ ಮಾಡುವುದು, ಡ್ರೈವ್ ಮಾಡುವಾಗ ಮೊಬೈಲ್ ಸಂಭಾಷಣೆ, ವಾಣಿಜ್ಯೋದ್ದೇಶದ ವಾಹನಗಳಲ್ಲಿ ಪ್ರಯಾಣಿಕರ ಸಾಗಣೆ ಮತ್ತು ಓವರ್ ಲೋಡಿಂಗ್- ಈ 6 ಕಾರಣಗಳಿಗೆ ಲೈಸೆನ್ಸ್ ರದ್ದು ಮಾಡಲು ಆರ್ಟಿಒಗೆ ಅಧಿಕಾರವಿದೆ.
ಹೆಚ್ಚಿನ ಮೊತ್ತದ ದಂಡ ವಿಧಿಸಿದರೂ ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ . ಮೂರು ತಿಂಗಳ ಕಾಲ ತನ್ನ ವಾಹನಾ ಚಾಲನಾ ಪರವಾನಗಿಯನ್ನು ನಿಷೇಧಿಸಿದರೆ ಅದರಿಂದ ತಕ್ಕ ಪಾಠ ಕಲಿಯುತ್ತಾರೆ ಎಂದು ಹೆದ್ದಾರಿ ಎಸ್ಪಿ ವಿಜಯ್ ಪಾಟೀಲ್ ಅಭಿಪ್ರಾಯ ಪಡುತ್ತಾರೆ.
ಕಳೆದ ವರ್ಷ ಮಹಾರಾಷ್ಟ್ರದಲ್ಲಿ 35,800 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿವೆ. ಪರಿಣಾಮವಾಗಿ 12,200 ಕ್ಕೂ ಅಧಿಕ ಸಾವುಗಳು ಸಂಭವಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸುಪ್ರೀಂ ಕೋಟರ್್ ನೇಮಿಸಿದ ಸಮಿತಿಯು ರಸ್ತೆ ಅಪಘಾತ ಮತ್ತು ಸಾವುಗಳನ್ನು 10% ರಷ್ಟು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 