ಪರಿಸರದ ಆರೋಗ್ಯ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯ : ಡಾ. ಪಾಂಡುರಂಗಿ
ಲೋಕದರ್ಶನ ಸುದ್ದಿ
ಧಾರವಾಡ 02: ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ನೀಡಿ ಜನರ ಆರೋಗ್ಯವನ್ನು ಕಾಪಾಡಲು ಒಬ್ಬ ಉತ್ತಮ ವೈದ್ಯ ಹೇಗೆ ತನ್ನ ಕರ್ತವ್ಯವನ್ನು ನಿಭಾಯಿಸುತ್ತಾನೆಯೋ, ಹಾಗೆಯೇ, ಸಧ್ಯ ಖಾಯಿಲೆಗೊಳ್ಳುತ್ತಿರುವ ನಿಸರ್ಗವನ್ನು ಕಾಪಾಡುವುದು ಎಲ್ಲ ಮನುಷ್ಯರ ಆದ್ಯ ಕರ್ತವ್ಯವಾಗಬೇಕು ಎಂದು ನೇಚರ್ ಫಸ್ಟ್ ಇಕೊ ವಿಲೇಜಿನಲ್ಲಿ ವಿಶ್ವ ವೈದ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಂದಿದ್ದ ಮನೋರೋಗ ತಜ್ಙ ಡಾ. ಆನಂದ ಪಾಂಡುರಂಗಿ ನೆರೆದಂತಹ ಪರಿಸರ ಪ್ರೇಮಿಗಳಿಗೆ ತಿಳಿಸಿದರು, ಅಷ್ಟೇ ಅಲ್ಲದೇ, ಮನುಷ್ಯ ಆರೋಗ್ಯದಿಂದರಬೇಕೆಂದರೆ ಅವನ ಸುತ್ತಮುತ್ತಲಿನ ಪರಿಸರ ಆರೋಗ್ಯವಾಗಿರಬೇಕು, ಆರೋಗ್ಯದ ಮೊದಲ ಪಾಠ ಪ್ರಾರಂಭವಾಗುವುದೇ ಪರಿಸರದಿಂದ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ನೇಚರ್ ಪಸ್ಟ್ ಇಕೋ ವಿಲೇಜಿನ ಪ್ರಧಾನ ಸೇವಕರಾದ ಪ್ರಕಾಶ ಗೌಡರ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ. ಅಚ್ಯುತ ಗದಗಕರ, ಡಾ.ಅನುಪಮಾ ಪಾಂಡುರಂಗಿ, ಅಯ್,ಆಯ,ಟಿ ಮದ್ರಾಸಿನ ಪ್ರಾಧ್ಯಾಪಕರು ದೇವೆಂದ್ರ ಹಾಗೂ ಪೂಣರ್ಿಮಾ ಜಾಲಿಹಾಳ, ಗದಗಿನ ಖ್ಯಾತ ಹಿರಿಯ ವ್ಯೆದ್ಯರಾದ ರಾಘವೇಂದ್ರ ಜಾಲಿಹಾಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 