ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ: ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.
ಈ ವೇಳೆ ಮಾತನಾಡಿದ ಮೋದಿ, ಈ ಹಿಂದಿನ ಸಕರ್ಾರ ವಿಳಂಬ ನೀತಿಯಿಂದ ಇಷ್ಟೊಂದು ತಡವಾಗಿದೆ. ಎಂಟರಿಂದ ಒಂಭತ್ತು ವರ್ಷಗಳ ಹಿಂದೆಯೇ ಈ ಹೈವೇ ಜನತೆಯ ಬಳಕೆಗೆ ದೊರೆಯಬೇಕಿತ್ತು ಎಂದು ಟೀಕಿಸಿದ್ದಾರೆ.
136 ಕಿ.ಮೀ ಉದ್ದದ ಕೆಎಂಪಿ ಎಕ್ಸ್ಪ್ರೆಸ್ವೇಯನ್ನು ಹರಿಯಾಣ ಸಕರ್ಾರ ನಿಮರ್ಿಸಿದೆ. ಈ ಹೈವೇ ನಿಮರ್ಾಣದ ಒಟ್ಟಾರೆ ಖರ್ಚನ್ನು ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶ 50:25:25 ಪ್ರಮಾಣದಲ್ಲಿ ಭರಿಸಿದೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಎಕ್ಸ್ಪ್ರೆಸ್ವೇಯನ್ನು ನಿಮರ್ಿಸಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿಯ ಟ್ರಾಫಿಕ್ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. 2006ರಲ್ಲಿ ಆರಂಭವಾದ ನಿಮರ್ಾಣ ಕಾರ್ಯ 2009ರಲ್ಲಿ ಮುಕ್ತಾಯವಾಗಬೇಕಿತ್ತು. 15 ವರ್ಷದ ಬಳಿಕ ಹಲವಾರು ಬಾರಿ ಗಡುವು ತಪ್ಪಿಸಿ ಕೊನೆಗೂ ಸಂಚಾರ ಮುಕ್ತವಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 