ಗುಳೇದಗುಡ್ಡ: ಮೃತರ ಕುಟುಂಬಕ್ಕೆ ಪರಿಹಾರ ಧನ ವಿತರಣೆ
ಲೋಕದರ್ಶನ ವರದಿ
ಗುಳೇದಗುಡ್ಡ 22: ಮುದ್ದೇಬಿಹಾಳ ತಾಲೂಕಿನ ಕಂದಗನೂರ ಗ್ರಾಮದ ಬಳಿ ವಾಹನ ಅಪಘಾತದಲ್ಲಿ ಮೃತಪಟ್ಟ ಹಳದೂರ ಗ್ರಾಮದ ಮೂವರು ಕುಟುಂಬದ ಸದಸ್ಯರಿಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ಸಿದ್ದರಾಮಯ್ಯ ಅವರು ನೀಡಿದ್ದ ತಲಾ 1 ಲಕ್ಷ ರೂ.ಗನ್ನು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಬಿ. ಸೌದಾಗರ ಮಂಗಳವಾರ ವಿತರಿಸಿದರು.
ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೌದಾಗಾರ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪರಿಹಾರಧನದ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜು ಜವಳಿ, ಮಲ್ಲಣ್ಣ ಯಲಿಗಾರ, ಜಿಪಂ ಮಾಜಿ ಸದಸ್ಯ ಎಂ.ಬಿ. ಹಂಗರಗಿ, ರಾಜು ಚಮ್ಮನಕಟ್ಟಿ, ಚಿದಾನಂದಸಾ ಕಾಟವಾ, ಜಿ.ಎಂ. ಸಿಂಧೂರ, ಅನೀಲಕುಮಾರ ದಡ್ಡಿ, ಜಮೀರ ಮೌಲ್ವಿ, ಗ್ರಾಪಂ ಸದಸ್ಯರಾದ ವೀರಬಸಪ್ಪ ಹುನಗುಂದ, ದೇವರಾಯಪ್ಪ ಮೂಲಿಮನಿ, ಪರಶುರಾಮ ಮಾದರ, ಎನ್.ಎಸ್. ರಾಂಪುರ, ನಿವೃತ್ತ ಡಿಡಿಪಿಐ ಎ.ಎಂ. ಮಡಿವಾಳರ, ಚನ್ನವೀರ ಅಂಗಡಿ, ಮಂಜುನಾಥ ಪುರ್ತಗೇರಿ, ಚನ್ನಪ್ಪ ಮೇಟಿ, ನಾಗಪ್ಪ ಕೆಂದೂರ, ಗುರಯ್ಯ ಹಿರೇಮಠ ಇತರರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 