ಹೂವಿನಹಡಗಲಿ: ಶಿಕ್ಷಕರಿಗೆ ಇಂಗ್ಲೀಷ್ ಪುನಶ್ಚೇತನ ಕಾರ್ಯಾಗಾರ
ಲೋಕದರ್ಶನ ವರದಿ
ಹೂವಿನಹಡಗಲಿ 02: ಇಂಗ್ಲಿಷ್ ಕಬ್ಬಿಣದ ಕಡಲೆ ಅಲ್ಲ. ಅದನ್ನು ಪ್ರತಿನಿತ್ಯ ಅಭ್ಯಾಸ ಮಾಡಿದರೆ ಸುಲಭವಾಗಿ ಕಲಿಯಬಹುದು ಎಂದು ಬೆಂಗಳೂರಿನ ಇಂಗ್ಲಿಷ್ ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷ ಡಾ.ಶಾಂತನಾಯ್ಕ ಹೇಳಿದರು.
ತಾಲೂಕಿನ ಹ್ಯಾರಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಸಕರ್ಾರಿ ಪ್ರೌಢಶಾಲೆ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಹ ಶಿಕ್ಷಕರ ಇಂಗ್ಲಿಷ್ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಗ್ಲಿಷ್ ಅಭ್ಯಸಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಬೇಕು ಎಂದರು.
ಮುಂಬಯಿಯ ಭೂ ಗರ್ಭ ಶಾಸ್ತ್ರಜ್ಞ ಪಾಲಾಕ್ಷ ಕರ್ಜಗಿ ಮಾತನಾಡಿ, ಪ್ರಪಂಚದ ಶಿಕ್ಷಣ ನೀತಿಯನ್ನು ಗ್ರಾಮೀಣ ಮಕ್ಕಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಮಾತನಾಡಿದರು. ತಾಪಂ ಮಾಜಿ ಅಧ್ಯಕ್ಷ ಪ್ರಕಾಶ ಹರವಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಬಿ.ದುರುಗಮ್ಮ, ಬಿಇಒ ಸಿ.ನಾಗರಾಜ, ಇಂಗ್ಲಿಷ್ ಭಾಷೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಶೇಕ್ ಅಹಮ್ಮದ್, ಶಿಕ್ಷಕ ಎಚ್.ಎಂ ಕೊಟ್ರಯ್ಯ, ಎಸ್ಡಿಎಂಸಿ ಅಧ್ಯಕ್ಷ ಎಸ್.ಬಸವಕುಮಾರ, ಶಿಕ್ಷಕರಾದ ಎಸ್.ಚಂದ್ರಪ್ಪ, ನಾಗರಾಜ, ಮಂಜುಳಾ ಇತರರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 