ಹೂವಿನಹಡಗಲಿ: ಲೋಕಾಯುಕ್ತ ಕುಂದು-ಕೊರತೆ ಸ್ವೀಕಾರ ಸಭೆ
ಲೋಕದರ್ಶನ ವರದಿ
ಹೂವಿನಹಡಗಲಿ 20: ಹೊಸ ದ್ವಿಚಕ್ರ,ವಾಹನಗಳನ್ನು ನೋಂದಾಯಿಸಲಿಕ್ಕೆ ಆರ್ಟಿಓ ಕಚೇರಿಯಲ್ಲಿ ಹೋದರೆ ಅಲ್ಲಿ ಮಧ್ಯವತರ್ಿಗಳ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದ್ದು ಹಣ ವಸೂಲಿಗೆ ನಿಲ್ಲುತ್ತಾರೆ ಕೂಡಲೇ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಜತೆಗೆ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆಯನ್ನು ತಡೆಯಬೇಕು ಎಂದು ಆರ್ಟಿಐ ಕಾರ್ಯಕರ್ತ ಚಂದ್ರಶೇಖರ ಸಭೆಗೆ ಗಮನಕ್ಕೆ ತಂದರು.
ಇಲ್ಲಿನ ತಾ.ಪಂ.ಮಲ್ಲಿಗೆ ಸಭಾಂಗಣದಲ್ಲಿ ಬುಧವರಾ ನಡೆದ ಹೊಸಪೇಟಿ ಲೋಕಾಯುಕ್ತ ವತಿಯಿಂದ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದ ಅವರು ಆರ್ಟಿಓ ಕಚೇರಿಗೆ ಹೋದರೆ ಅಧಿಕಾರಿಗಳು, ಮಧ್ಯವರ್ತಿಗಳು ಯಾರು ಎಂಬುದು ಗೊತ್ತಾಗಲ್ಲ ಕೂಡಲೇ ಅಧಿಕಾರಿಗಳು ಗುರುತಿನ ಚೀಟಿಯನ್ನು ಕೊರಳಲ್ಲಿ ಇದ್ದಾರೆ ಸಾರ್ವಜನಿಕರಿಗೆ ತೊಂದರೆಯಾಗಲ್ಲ ಎಂದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಎ.ವಸಂತ ಮಾತನಾಡಿ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಕರ್ಾರದ ಸೂತ್ತಲೆಯಂತೆ ಗುರುತಿನ ಚೀಟಿ ಎಲ್ಲರೂ ಕೊರಳಲಿ ಹಾಕಿಕೊಳ್ಳಬೇಕು ಎಂದ ಅವರು ಮಧ್ಯವತರ್ಿಗಳ ಹಾವಳಿಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ತಹಶೀಲ್ದಾರ ಕೆ.ರಾಘವೇಂದ್ರರಾವ್ ಮಾತನಾಡಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪಹಣಿ ತಿದ್ದುಪಡಿ ವಿಳಂಬ,ಪಿಂಚಣೆಯಲ್ಲಿ ಕೆಲವೊಂದು ಲೋಪಗಳನ್ನು ಕೂಡಲೇ ಸರಿಪಡಿಸಲಾಗುವುದು ಎಂದ ಅವರು ಇಲಾಖೆ ಅನುದಾನದಲ್ಲಿ ಸಿಬ್ಬಂದಿಗೆ ಗುರುತಿನ ಚೀಟಿ ವಿತರಿಸುತ್ತೇನೆ ಎಂದರು.
ತಾ.ಪಂ.ಕಾರ್ಯನಿರ್ವಾಹಕಾಧಿಕಾರಿ ಯು.ಎಚ್.ಸೋಮಶೇಖರ ಮಾತನಾಡಿ ದೇವಗೊಂಡನಹಳ್ಳಿ ಗ್ರಾ.ಪಂ.ಯ ಸಮಸ್ಯೆಯಲ್ಲಿ ಆರ್ಟಿಐ ಕಾರ್ಯಕರ್ತ ನಂದಿಹಳ್ಳಿ ಮಹೇಂದ್ರ ಅವರು ನನ್ನ ಮೇಲೆ ವಿನಾ ಕಾರಣ ಆರೋಪ ಮಾಡಿ ನನ್ನ ಬಗ್ಗೆ ಇಲ್ಲಸಲ್ಲದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವದರಿಂದ ನನಗೆ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ ಮಹೇಂದ್ರ ಅವರ ಮೇಲೆ ನ್ಯಾಯಾಲಯ ಮೊರೆ ಹೋಗುತ್ತೇನೆ ಎಂದ ಎಚ್ಚರಿಸಿದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 