ಹೂವಿನಹಡಗಲಿ: ರೈತ ಸಂಪರ್ಕ ಕೇಂದ್ರಕ್ಕೆ ಸಂಸದ ದೇವೇಂದ್ರಪ್ಪ ದಿಢೀರ್ ಭೇಟಿ
ಹೂವಿನಹಡಗಲಿ 15: ತಾಲೂಕಿನ ಹಿರೇಹಡಗಲಿಯ ರೈತ ಸಂಪರ್ಕ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಸಂಸದ ವೈ.ದೇವೇಂದ್ರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೂರವಾಣಿಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಬಿ.ಪಾಟೀಲ್ ಜತೆ ಮಾತನಾಡಿದ ಸಂಸದರು, ಇಲಾಖೆಯಿಂದ ಏರ್ಪಡಿಸುವ ರೈತ ಮೇಳ, ವಿವಿಧ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿ, ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದೀರಿ. ಇನ್ನು ಮುಂದೆ ಎಲ್ಲ ಕಾರ್ಯಕ್ರಮಗಳ ಬಗ್ಗೆ ನಮಗೆ ಮಾಹಿತಿ ನೀಡಬೇಕು. ಸಕರ್ಾರದ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು ಎಂದು ಸೂಚಿಸಿದ್ದಾರೆ.
ಪತ್ರ ಬರೆಯಿರಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಮನಗಂಡ ಸಂಸದರು, ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದ್ದಾರೆ. ನಿವೃತ್ತ ಇಂಜಿನಿಯರ್ ಓದೋ ಗಂಗಪ್ಪ, ಮುಖಂಡರಾದ ಕೊಂಪಿ ವೀರಭದ್ರಪ್ಪ, ಅಂಜಿನಪ್ಪ, ಕೊಟ್ರೇಶ, ಉಚ್ಚೆಂಗೆಪ್ಪ, ಭೀಮಣ್ಣ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 