ವಿಶ್ವ ಬಂಧುತ್ವ ಸಾರಿದ ರೇಣುಕಾಚಾರ್ಯರ ಸಂದೇಶ ದಾರಿದೀಪ: ರಂಭಾಪುರಿ ಶ್ರೀ
ಹುಬ್ಬಳ್ಳಿ 11: ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮ ಸಂಸ್ಥಾಪನಾಚಾರ್ಯರಾದ ಜಗದ್ಗುರು ರೇಣುಕಾಚಾರ್ಯರ ವಿಶ್ವಬಂಧುತ್ವ ಸಾರಿದ ಸಂದೇಶ ಸರ್ವರಿಗೂ ದಾರಿದೀಪ ಎಂದು ಅವರು ತಾಲೂಕಿನ ರಂಭಾಪುರಿ ಜಗದ್ಗುರುಗಳವರ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಸುಖ ಸಮೃದ್ಧಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ಅರಿವು ಮತ್ತು ಆಚಾರಗಳ ಮೂಲಕ ಮಾನವನ ಬದುಕು ಶ್ರೀಮಂತಗೊಳ್ಳಬೇಕಾಗಿದೆ. ವೀರಶೈವ ಧರ್ಮದಲ್ಲಿ ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆಗೆ ವಿಶೇಷ ಮಹತ್ವ ಕೊಟ್ಟಿದ್ದಾರೆ. ಕಾಯಕ ಮತ್ತು ದಾಸೋಹದ ಮೂಲಕ ಬದುಕಿನಲ್ಲಿ ಶ್ರೇಯಸ್ಸನ್ನು ಕಾಣಲು ಸಾಧ್ಯವೆಂದು ಜಗದ್ಗುರು ರೇಣುಕಾಚಾರ್ಯರು ಸಾರಿದ್ದಾರೆ. ಹಳ್ಳಿಯಾಳ ಗ್ರಾಮದ ಸಕಲ ಸದ್ಭಕ್ತರು ಸೇರಿ ಜಗದ್ಗುರು ರೇಣುಕಾಚಾರ್ಯರ ನೂತನ ರಥ ನಿಮರ್ಿಸಿ ಜಾತ್ರೆ ನೆರವೇರಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾಯರ್ಯ ಸ್ವಾಮಿಗಳು ಮಾತನಾಡಿ ಮಾನವ ಜೀವನದಲ್ಲಿ ಒಂದು ಗುರಿ ಬೇಕು. ಆ ಗುರಿ ತಲುಪಿಸಲು ಗುರುವಿನ ಅವಶ್ಯಕತೆಯಿದೆ ಎಂದರು.
ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕ ಗದಿಗೆಯ್ಯ ಹಿರೇಮಠರಿಂದ ವೇದಘೋಷ, ಗಂಗಾಧರಸ್ವಾಮಿ ಅವರಿಂದ ಭಕ್ತಿ ಗೀತೆ ಜರುಗಿತು. ಬಿ.ಡಿ. ನಾಗನಗೌಡರ ಸ್ವಾಗತಿಸಿದರು. ಗುರುನಾಥಗೌಡ ಮಾದಾಪುರ ನಿರೂಪಿಸಿದರು.
ಬೆಳಿಗ್ಗೆ ಲಿಂಗೋದ್ಭವ ಜಗದ್ಗುರು ರೇಣುಕಾಚಾರ್ಯ ಮಂಗಲ ಮೂತರ್ಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಲ ನೆರವೇರಿದವು. ಸಂಜೆ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 