ಕಂಪ್ಲಿ: ರೈತರಿಗೆ ಬೆಳೆಸಾಲ ಮಂಜೂರು ಪತ್ರ ವಿತರಣೆ
ಕಂಪ್ಲಿ 02: ಇಲ್ಲಿಯ ಕನರ್ಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ 40ಫಲಾನುಭವಿಗಳಿಗೆ ಶನಿವಾರ ಬೆಳೆ ಸಾಲ ಮಂಜೂರು ಪತ್ರ ವಿತರಿಸಲಾಯಿತು.
ಕನರ್ಾಟಕ ಗ್ರಾಮೀಣ ಬ್ಯಾಂಕ್ ಬಳ್ಳಾರಿ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಆರ್.ದೊಡ್ಡಪ್ಪ ಮಾತನಾಡಿ, ಪ್ರತಿಯೊಬ್ಬ ರೈತರು ಬ್ಯಾಂಕಿನಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಪಡೆಯಿರಿ 'ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಸದುಪಯೋಗ ಪಡೆಯುವಂತೆ' ಮನವಿ ಮಾಡಿದರು.
ಬ್ಯಾಂಕ್ ವ್ಯವಸ್ಥಾಪಕ ಟಿ. ಆಂಜನೇಯ ಮಾತನಾಡಿ, '2019-20ನೇ ಸಾಲಿನಲ್ಲಿ ಬ್ಯಾಂಕ್ ರೈತರ ಕೃಷಿ ಸಾಲಕ್ಕೆ ಹೆಚ್ಚು ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಈಗಾಗಲೆ ಕೃಷಿಗಾಗಿ ರೂ. 8.68ಕೋಟಿ ಸಾಲ ವಿತರಿಸಿದೆ' ಎಂದು ಮಾಹಿತಿ ನೀಡಿದರುಆರ್ಥಿಕ ಸಾಕ್ಷರತಾ ಕೇಂದ್ರದ ಎಚ್. ಮಲ್ಲಪ್ಪ ಮತ್ತು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಧರ್ ಮಾತನಾಡಿದರು.ಪ್ರಧಾನಮಂತ್ರಿಯವರು ಉತ್ತರಪ್ರದೇಶದ ಚಿತ್ರಕೂಟದಲ್ಲಿ ಕಿಸಾನ್ ಸಮ್ಮಾನ್ ಉದ್ಘಾಟಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಟಿ.ವಿ. ಮೂಲಕ ಪ್ರಸಾರ ಮಾಡಲಾಯಿತು.
ಶಾಖೆ ಕ್ಷೇತ್ರಾಧಿಕಾರಿ ರಸೂಲ್, ಸಹಾಯಕ ವ್ಯವಸ್ಥಾಪಕಿ ಅಮೃತಾ, ಸಿಬ್ಬಂದಿ
ಮನುಷಾ, ಬಾರ್ಗವಿ, ರಾಜಶೇಖರ್, ಗುರುಕೃಷ್ಣ, ಪರಶುರಾಮ, ಗ್ರಾಹಕರು, ರೈತರು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 