ಕಂಪ್ಲಿ: ಈಶ್ವರ ದೇವರ ಹೂವಿನ ರಥೋತ್ಸವ
ಲೋಕದರ್ಶನ ವರದಿ
ಕಂಪ್ಲಿ 22: ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಈಶ್ವರ ದೇವರ 9ನೇ ವರ್ಷದ ಹೂವಿನ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ಜರುಗಿತು.
ಈಶ್ವರ ದೇವಸ್ಥಾನದಿಂದ ಆರಂಭಗೊಂಡ ಹೂವಿನ ತೇರು ಗ್ರಾಮದ ಮುಖ್ಯರಸ್ತೆ ಮೂಲಕ ಎದುರು ಬಸವಣ್ಣನ ಕಟ್ಟೆಯವರೆಗೆ ಸಾಗಿ ಪುನಃ ಸ್ವಸ್ಥಾನಕ್ಕೆ ಮರಳಿತು.
ತೇರು ಸಾಗುವಾಗ ನೆರೆದಿದ್ದ ಭಕ್ತರು ಉತ್ತತ್ತಿ ತೂರಿ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ತಾಷರಾಂಡೋಲು, ಡೊಳ್ಳು, ಮಂಗಲವಾದ್ಯ, ಹಗಲುವೇಷ ಕಲಾವಿದರು, ಜನಪದ ತಂಡದವರು ಭಾಗವಹಿಸಿದ್ದರು.
ಗಂಗೆಸ್ಥಳ ಮಹೋತ್ಸವ, ಈಶ್ವರ ದೇವರಿಗೆ ಮಹಾರುದ್ರಾಭಿಷೇಕ ಸೇರಿದಂತೆ ವಿವಿಧ ಧಾಮರ್ಿಕ ಕಾರ್ಯಕ್ರಮಗಳು ಜರುಗಿದವು
ಶ್ರೀ ನವಲಗುಂದ ನಾಗಲಿಂಗ ಶರಣರ ಪುರಾಣ ಪ್ರವಚನ ಮಹಾಮಂಗಲಗೊಂಡಿತು. ಲಿಂಗದಹಳ್ಳಿ ವೇದಮೂರ್ತಿ ಸೋಮಯ್ಯಶಾಸ್ತ್ರಿ ಪುರಾಣ ಪ್ರವಚನಕ್ಕೆ ಅಗ್ರಹಾರ ಸೋಮಶೇಖರಯ್ಯ ಗವಾಯಿಗಳ ಹಾರ್ಮೋನಿಯಂ, ಚನ್ನದಾರ ಅಂಜಿನಪ್ಪ ತಬಲಾಸಾಥ್ ನೀಡಿದರು. ಶ್ರೀ ಈಶ್ವರ ದೇವಸ್ಥಾನ ಸೇವಾ ಸಮಿತಿಯವರು, ಸಕಲ ಸದ್ಭಕ್ತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 