ಮಳೆರಾಯನ ಕೃಪೆಗಾಗಿ ಕಪ್ಪೆಗಳ ಮದುವೆ ಮಾಡಿದ ಮುದೇನೂರ ಗ್ರಾಮಸ್ಥರು
ಮಳೆರಾಯನ ಕೃಪೆಗಾಗಿ ಮುದೇನೂರ ಗ್ರಾಮಸ್ಥರು ಕಪ್ಪೆಗಳ ಮದುವೆ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು.
ಲೋಕದರ್ಶನ ವರದಿ
ರಾಮದುರ್ಗ: ಪ್ರಾರಂಭದಲ್ಲಿ ಆದ ಅಲ್ಪಸ್ವಲ್ಪ ಮಳೆಯನ್ನು ನಂಬಿ, ಮಳೆರಾಯನ ಕೃಪೆಯ ಭರವಸೆಯಲ್ಲಿ ಭೂಮಿ ಬಿತ್ತನೆ ಮಾಡಿದ ರೈತರಿಗೆ ಮತ್ತೆ ಮಳೆಯಾಗದೇ ಆತಂಕದ ಛಾಯೆ ಅಧಿಕೊಗೊಳ್ಳುತ್ತಿರುವುದು ಒಂದೆಡೆದಾರೆ, ಮೊತ್ತೊಂದೆಡೆ ಕತ್ತೆ, ಕಪ್ಪೆಗಳ ಮದುವೆ ಮಾಡುವ ಪರಂಪರೆಯಿಂದರೂ ರೈತರು ಇನ್ನು ಹೊರಬಂದಿಲ್ಲ.
ಇದಕ್ಕೆ ಸಾಕ್ಷಿ ಎಂಬಂತೆ ತಾಲೂಕಿನ ಮದೇನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಮುದೇನೂರ ಗ್ರಾಮದಲ್ಲಿ ಕಪ್ಪೆಗಳ ಮದುವೆ ಮಾಡಿ, ಮಳೆರಾಯನ ಕೃಪೆಗೆ ಅಂಗಲಾಚಿದ ಘಟನೆ ನಡೆದಿದೆ.
ಮದುವೆ ಊಟ ಉಣಬಡಿಸಿದ ರೈತರುಃ
ಮಾನವರಿಗೆ ಮಾಡುವ ಮದುವೆ ಸಂಪ್ರದಾಯದಂತೆ ಗಂಡು ಹೆಣ್ಣಿನ ಕಡೆಯಿಂದ ನಡೆಯಬೇಕಾದ ಮದುವೆ ಪೂರ್ವದ ವಿಶಿಷ್ಠ ಸಂಪ್ರದಾಯವನ್ನು ಆಚರಣೆ ಮಾಡಿ, ನಂತರ ಸೇರಿದಂತೆ ಸರ್ವ ಜನತೆಗೂ ಮುದವೆ ದಿಬ್ಬನದ ಊಟ ಉಣಬಡಿಸಿ ಸ್ಥಳೀಯ ದೇವರಲ್ಲಿ ಮಳೆಗಾಗಿ ಪ್ರಾರ್ಥಸಿದರು.
ಹೋಮ-ಹವನಃ
ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಲಿ ಎಂಬಂತೆ ವಿವಿಧ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸುವ ಮೂಲಕ ರೈತರು ಮಳೆರಾಯನ ಕೃಪೆಗಾಗಿ ವಿವಿಧ ಸಂದ್ರದಾಯಗಳ ಆಚರಣೆಗೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಮುದೇನೂರ ಗ್ರಾಮಸ್ಥರಾದ ನಾಗಪ್ಪ ವಜ್ರಮಟ್ಟಿ, ತಿಮ್ಮಣ್ಣ ಹಕಾಟಿ, ಅಲ್ಲಿಸಾಬ ಕಡಕೋಳ, ಅಜರ್ುನ ಸಿಂಗಾಡಿ, ಬಸವರಾಜ ಗುಟ್ಟಿ ಸೇರಿದಂತೆ ಗ್ರಾಮದ ನೂರಾರು ಮಹಿಳೆಯರು ಹಾಗೂ ಇತರರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 