ಮಾತುಕತೆಗಾಗಿ ಮೋದಿ ಭೇಟಿಗೆ ಇಮ್ರಾನ್ ಖಾನ್ ಸಿದ್ಧ
ಇಸ್ಲಾಮಾಬಾದ್: ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಯತ್ನಿಸುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನದ ಮನಸ್ಥಿತಿ ಬದಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಜನತೆ ಭಾರತದೊಂದಿಗೆ ಶಾಂತಿಯನ್ನು ಬಯಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆಗೆ ಸಿದ್ಧವಿದ್ದೇವೆ ಎಂದಿರುವ ಇಮ್ರಾನ್ ಖಾನ್, ಕಾಶ್ಮೀರದ ವಿವಾದ ಬಗ್ಗೆಯೂ ಮಾತನಾಡಿದ್ದು ಯಾವುದೂ ಅಸಾಧ್ಯವಲ್ಲ ಎಂದು ಹೇಳಿದ್ದಾರೆ.
ಮಾತುಕತೆ ನಡೆಸೋಣ, ಯಾವುದೇ ವಿಷಯವಾಗಿಯೂ ಮಾತುಕತೆಗೆ ನಾನು ಸಿದ್ಧನಿದ್ದೇನೆ, ಕಾಶ್ಮೀರ ವಿಷಯದಲ್ಲಿ ಸೇನಾ ಪರಿಹಾರ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇದೇ ವೇಳೆ ದೇಶದ ಹೊರಗೆ ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನದ ನೆಲ ಬಳೆಕೆಯಾಗುತ್ತಿರುವ ಆರೋಪದ ಬಗ್ಗೆಯೂ ಮಾತನಾಡಿರುವ ಇಮ್ರಾನ್ ಖಾನ್, ಪಾಕಿಸ್ತಾನ ನೆಲವನ್ನು ಭಯೋತ್ಪಾದನೆಗಾಗಿ ಬಳಕೆ ಮಾಡಿಕೊಳ್ಳುವುದು ನೀಡುವುದು ನಮ್ಮ ಹಿತಾಸಕ್ತಿಯಲ್ಲ. ಪಾಕಿಸ್ತಾನದ ಮನಸ್ಥಿತಿ ಬದಲಾಗಿದೆ. ಪಾಕಿಸ್ತಾನದ ಜನತೆ ಭಾರತದೊಂದಿಗೆ ಶಾಂತಿ ಬಯಸುತ್ತಿದ್ದಾರೆ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆ ಎಂದು ಇಮ್ರಾನ್ ಭಾರತೀಯ ಪತ್ರಕರ್ತರ ತಂಡದೊಂದಿಗಿನ ಸಂವಾದದಲ್ಲಿ ಹೇಳಿದ್ದಾರೆ.
ಇದೇ ವೇಳೆ 2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ್ನು ಶಿಕ್ಷಿಸುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಇಮ್ರಾನ್ ಖಾ, ಹಫೀಜ್ ಸಯೀದ್ ವಿರುದ್ಧ ಈಗಾಗಲೇ ವಿಶ್ವಸಂಸ್ಥೆ ನಿರ್ಬಂಧಗಳಿವೆ ಎಂದು ಹೇಳಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 